ಮಾಯಾವತಿ, ಅಖಿಲೇಶ್ ಯಾದವ್ 
ದೇಶ

ಉತ್ತರ ಖಂಡ್, ಮಧ್ಯಪ್ರದೇಶದಲ್ಲೂ ಬಿಎಸ್ಪಿ- ಎಸ್ಪಿ ಮೈತ್ರಿ ವಿಸ್ತರಣೆ

ಮುಂಬರುವ ಲೋಕಸಭಾ ಚುನಾವಣೆಗಾಗಿ ಉತ್ತರ ಪ್ರದೇಶದಲ್ಲಿ ಮಹಾಘಟಬಂದನ್ ನಿಂದ ಹೊರಗುಳಿದು ಮೈತ್ರಿ ಮಾಡಿಕೊಂಡಿರುವ ಬಿಎಸ್ಪಿ ಹಾಗೂ ಎಸ್ಪಿ ಪಕ್ಷಗಳು, ಉತ್ತರ ಖಂಡ್ ಹಾಗೂ ಮಧ್ಯಪ್ರದೇಶದಲ್ಲೂ ಮೈತ್ರಿ ವಿಸ್ತರಿಸಿಕೊಂಡಿವೆ.

ಲಖನೌ:  ಮುಂಬರುವ ಲೋಕಸಭಾ ಚುನಾವಣೆಗಾಗಿ ಉತ್ತರ ಪ್ರದೇಶದಲ್ಲಿ  ಮಹಾಘಟಬಂದನ್ ನಿಂದ  ಹೊರಗುಳಿದು ಮೈತ್ರಿ ಮಾಡಿಕೊಂಡಿರುವ ಬಿಎಸ್ಪಿ ಹಾಗೂ ಎಸ್ಪಿ ಪಕ್ಷಗಳು, ಉತ್ತರ ಖಂಡ್ ಹಾಗೂ ಮಧ್ಯಪ್ರದೇಶದಲ್ಲೂ ಮೈತ್ರಿ ವಿಸ್ತರಿಸಿಕೊಂಡಿವೆ.

ಮಧ್ಯಪ್ರದೇಶದ 29 ಕ್ಷೇತ್ರಗಳ ಪೈಕಿ ಬಾಲ್ಗಟ್, ಟಿಕಮ್ ಘಡ, ಖಜುರಾಹೋದಲ್ಲಿನ ಮೂರು ಕ್ಷೇತ್ರಗಳಲ್ಲಿ ಮಾತ್ರ ಎಸ್ಪಿ ಸ್ಪರ್ಧಿಸಲಿದ್ದು, ಉಳಿದ 26 ಸ್ಥಾನಗಳಲ್ಲಿ ಬಿಎಸ್ಪಿ ಪಕ್ಷ ಸ್ಪರ್ಧಿಸಲಿದೆ.

ಉತ್ತರ ಖಂಡ್ ನಲ್ಲೂ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹಾಗೂ ಎಸ್ಪಿಯ ಮುಖ್ಯಸ್ಥ ಅಖಿಲೇಶ್  ಯಾದವ್ ಮೈತ್ರಿ ಮಾಡಿಕೊಂಡಿದ್ದಾರೆ. ಉತ್ತರ್ ಖಂಡ್ ನ ಗರ್ವಾಲಾ ಕ್ಷೇತ್ರದಲ್ಲಿ ಮಾತ್ರ ಎಸ್ಪಿ ಸ್ಪರ್ಧಿಸಲಿದ್ದು, ಉಳಿದ ನಾಲ್ಕು  ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧಿಸಲಿದೆ

ಉತ್ತರ ಪ್ರದೇಶದಲ್ಲಿ ಬಿಎಸ್ಪಿ 38, ಎಸ್ಪಿ 37, 2 ಕಾಂಗ್ರೆಸ್  ಸೇರಿದಂತೆ ಇತರ ಪಕ್ಷಗಳು 5 ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮಾಯಾವತಿ ಹಾಗೂ ಅಖಿಲೇಶ್ ಯಾದವ್ ಮೈತ್ರಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT