ಸಂಗ್ರಹ ಚಿತ್ರ 
ದೇಶ

'ಆ 21 ನಿಮಿಷ' ಭಾರತದ 3ನೇ ಬಲಿಷ್ಠ ಯುದ್ಧ ವಿಮಾನ 'ಮಿರಾಜ್-2000' ಕಾರ್ಯಾಚರಣೆ ಹೇಗಿತ್ತು?

ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ದಾಳಿ ನಡೆಸುತ್ತದೆ ಎಂಬ ಹೆದರಿಕೆಯಲ್ಲಿದ್ದ ಪಾಕಿಸ್ತಾನ ಹದ್ದಿನ ಕಣ್ಣಿಟ್ಟು ಕಾವಲು ಕಾಯುತ್ತಿದ್ದರು ಅಂತಾರಾಷ್ಟ್ರೀಯ ಗಡಿಯನ್ನೇ...

ನವದೆಹಲಿ: ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ದಾಳಿ ನಡೆಸುತ್ತದೆ ಎಂಬ ಹೆದರಿಕೆಯಲ್ಲಿದ್ದ ಪಾಕಿಸ್ತಾನ ಹದ್ದಿನ ಕಣ್ಣಿಟ್ಟು ಕಾವಲು ಕಾಯುತ್ತಿದ್ದರು ಅಂತಾರಾಷ್ಟ್ರೀಯ ಗಡಿಯನ್ನೇ ದಾಟಿದ ಭಾರತದ ಬಲಿಷ್ಠ ಯುದ್ಧ ವಿಮಾನ ಮಿರಾಜ್-2000 ದೊಡ್ಡ ಪ್ರಮಾಣದಲ್ಲಿ ವಿಧ್ವಂಸಕವನ್ನೇ ಸೃಷ್ಠಿಸಿ ಯಶಸ್ವಿಯಾಗಿ ಸ್ವದೇಶಕ್ಕೆ ಮರಳಿದೆ.
ಹೌದು. ಮಿರಾಜ್ 2000 ಯುದ್ಧ ವಿಮಾನ ಲೇಸರ್ ನಿಯಂತ್ರಿತ ಬಾಂಬ್ ಬಳಸಿ ದಾಳಿ ನಡೆಸಿದೆ. ಪಾಕಿಸ್ತಾನದ ರೇಡಾರ್ ಅನ್ನೇ ಕಣ್ತಪ್ಪಿಸಿ ಭಾರತೀಯ ವಾಯುಪಡೆ ಪಾಕಿಸ್ತಾನದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ಮಾಡಿದೆ. ಪಂಜಾಬ್ ನ ಆದಂಪುರ್ ವಾಯುನೆಲೆಯಿಂದ ರ್ಯಾಪಿಡ್ ಸೀಕ್ ಮತ್ತು ಡೆಸ್ಟ್ರಾಯ್ ಮಿಷನ್ ಶುರು ಮಾಡಲಾಗಿತ್ತು. ಈ ಕಾರ್ಯಾಚರಣೆ ಯಶಸ್ವಿಯಾಗಿ ನೆರವೇರಿದೆ. 
ಗಡಿ ನಿಯಂತ್ರಣ ರೇಖೆಯೊಳಗೆ ನುಗ್ಗಿದ 21 ನಿಮಿಷಗಳಲ್ಲಿ ಮಿರಾಜ್-2000 ಮಿಂಚಿನ ವೇಗದಲ್ಲಿ ದಾಳಿಯನ್ನು ನಡೆಸಲಾಗಿದೆ. ಬಾಲಾಕೋಟ್ ನಲ್ಲಿನ ಉಗ್ರರ ಕ್ಯಾಂಪ್ ಮೇಲೆ ಮುಂಜಾನೆ 3.45ಕ್ಕೆ ಮುಜಫ್ಫರಾಬಾದ್ ನಲ್ಲಿನ ಉಗ್ರರ ಕ್ಯಾಂಪ್ ಮೇಲೆ ಮುಂಜಾನೆ 3.48ಕ್ಕೆ ಚಾಕೋಟಿ ನಲ್ಲಿನ ಉಗ್ರರ ಕ್ಯಾಂಪ್ ಮೇಲೆ ಮುಂಜಾನೆ 3.58ಕ್ಕೆ ದಾಳಿ ನಡೆಸಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ.
ಭಾರತೀಯ ವಾಯುಪಡೆಯ ಯುದ್ಧ ವಿಮಾನ ಮಿರಾಜ್ ಬಾಂಬ್ ದಾಳಿ ನಡೆಸಿದಾಗ ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಸೇನೆ ತಾವು ಪ್ರತಿದಾಳಿ ನಡೆಸಿರುವುದಾಗಿ ಹೇಳಿದೆ. ಆದರೆ ಪಾಕ್ ಪ್ರತಿದಾಳಿಗೂ ಮುನ್ನ ಮಿರಾಜ್ ಸ್ವದೇಶಕ್ಕೆ ಮರಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT