ದೇಶ ಸುರಕ್ಷಿತ ಕೈಗಳಲ್ಲಿವೆ, ದೇಶಕ್ಕಿಂತ ಮಿಗಿಲು ಯಾವುದೂ ಇಲ್ಲ, ದೇಶ ತಲೆತಗ್ಗಿಸಲು ಬಿಡಲ್ಲ- ಪ್ರಧಾನಿಮೋದಿ 
ದೇಶ

ದೇಶ ಸುರಕ್ಷಿತ ಕೈಗಳಲ್ಲಿದೆ, ದೇಶಕ್ಕಿಂತ ಮಿಗಿಲು ಯಾವುದೂ ಇಲ್ಲ, ದೇಶ ತಲೆ ತಗ್ಗಿಸಲು ಬಿಡಲ್ಲ: ಪ್ರಧಾನಿ ಮೋದಿ

ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ, ದೇಶ ಎಂದಿಗೂ ತಲೆತಗ್ಗಿಸುವಂತೆ ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಚುರು: ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ, ದೇಶ ಎಂದಿಗೂ ತಲೆತಗ್ಗಿಸುವಂತೆ ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ಪುಲ್ವಾಮ ಉಗ್ರ ದಾಳಿಗೆ ಪ್ರತೀಕಾರ ತೆಗೆದುಕೊಳ್ಳಲು, ಫೆ.25 ರಂದು ರಾತ್ರಿ ಭಾರತೀಯ ವಾಯುಪಡೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ತರಬೇತಿ ಕ್ಯಾಂಪ್ ಗಳ ಮೇಲೆ ಬಾಂಬ್ ದಾಳಿ ನಡೆಸಿ ಕನಿಷ್ಟ 300 ಉಗ್ರರನ್ನು ಭಸ್ಮ ಮಾಡಿತ್ತು. ಈ ಬೆನ್ನಲ್ಲೇ ಫೆ.26 ರಂದು ರಾಜಸ್ಥಾನದ ಚುರುವಿನಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, 2014 ರಲ್ಲಿ ತಾವು ಚುರುವಿನಲ್ಲೇ ಹೇಳಿದ್ದ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ. 
ದೇಶಕ್ಕಿಂತ ಮಿಗಿಲು ಯಾವುದೂ ಇಲ್ಲ, ದೇಶ ತಲೆತಗ್ಗಿಸಲು ಬಿಡುವುದಿಲ್ಲ ಎಂದು 2014 ರಲ್ಲಿ ಇದೇ ಚುರುವಿನಲ್ಲಿ ನನ್ನ ಮನದಾಳದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ. 2014 ರ ದಿನವನ್ನು ಮತ್ತೆ ನೆನಪಿಸಿಕೊಳ್ಳುತ್ತುದ್ದೇನೆ ದೇಶ ಸುರಕ್ಷಿತವಾದ ಕೈಗಳಲ್ಲಿದೆ ಎಂಬ ಭರವಸೆ ನೀಡುತ್ತೇನೆ. ದೇಶ ತಲೆತಗ್ಗಿಸಲು ಬಿಡುವುದಿಲ್ಲ ಎಂದು ಮೋದಿ ಹೇಳಿದ್ದಾರೆ. 
ಇದೇ ವೇಳೆ ಯೋಧರ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರ ಯೋಧರಿಗೆ ರಾಷ್ಟ್ರೀಯ ಯುದ್ಧ ಸ್ಮಾರಕ ಯೋಧರಿಗೆ ಅರ್ಪಣೆ ಮಾಡಿದ್ದೇವೆ, ನಮ್ಮ ಸರ್ಕಾರ ಬಂದ ನಂತರ 20 ಲಕ್ಷಕ್ಕಿಂತ ಹೆಚ್ಚು ಯೋಧರ ಕುಟುಂಬಗಳಿಗೆ ಒಆರ್ ಒಪಿ ಲಾಭ ದೊರೆತಿದೆ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದಿಟ್ಟು ಮೂವರು ಸೋದರಿಯರು ಆತ್ಮಹತ್ಯೆ-Video

ಹೊಸ ವ್ಯಾಪಾರ ಒಪ್ಪಂದ: US ಸರಕುಗಳು ಅಗ್ಗದ ದರದಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ, ನಮ್ಮ ರೈತರು ಏನು ಮಾಡ್ಬೇಕು? ಸಂಜಯ್ ರಾವತ್ Video

ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆ, MLA ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು, ಇದೇನಿದು ಹರಿಪ್ರಸಾದ್ ಆರೋಪ?

ಹಿಂದೂ ಧರ್ಮ, ಹಿಂದೂಗಳು, ಹಿಂದೂಗಳ ಆಚರಣೆಗಳು ಅಂದರೆ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ಅಸಡ್ಡೆ? ಯಾಕಿಷ್ಟು ದ್ವೇಷ?

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಕಳ್ಳತನ: ಭಾರತದ ಖಂಡನೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

SCROLL FOR NEXT