ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ತೆರಿಗೆದಾರರ ಹಣ ಲೂಟಿ ಮಾಡುವುದು ತಡೆದಿದ್ದು ವಿರೋಧ ಪಕ್ಷದವರಿಗೆ ಕಷ್ಟವಾಗಿದೆ: ಪ್ರಧಾನಿ ಮೋದಿ

ಹಿಂದಿನ ಸರ್ಕಾರದಲ್ಲಿ ಸರ್ಕಾರದ ಸೌಲಭ್ಯಗಳನ್ನು ಮತ್ತು ನೆರವನ್ನು ಸುಮಾರು 8 ಕೋಟಿ ನಕಲಿ ಫಲಾನುಭವಿಗಳು ಪಡೆಯುತ್ತಿದ್ದರು. ಆದರೆ ...

ನವದೆಹಲಿ: ಹಿಂದಿನ ಸರ್ಕಾರದಲ್ಲಿ ಸರ್ಕಾರದ ಸೌಲಭ್ಯಗಳನ್ನು ಮತ್ತು ನೆರವನ್ನು ಸುಮಾರು 8 ಕೋಟಿ ನಕಲಿ ಫಲಾನುಭವಿಗಳು ಪಡೆಯುತ್ತಿದ್ದರು. ಆದರೆ ತಮ್ಮ ಸರ್ಕಾರ ಬಂದ ಮೇಲೆ ದೇಶದ ತೆರಿಗೆ ಪಾವತಿದಾರರ ಹಣವನ್ನು ಲೂಟಿ ಮಾಡುವುದನ್ನು ತಡೆದ ಕಾರಣ ವಿರೋಧ ಪಕ್ಷದ ನಾಯಕರು ನಮ್ಮನ್ನು ನಿಂದಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎನ್ ಡಿಎ ಸರ್ಕಾರದ ಜನ ಧನ ಯೋಜನೆ, ಆಧಾರ್ ಕಾರ್ಡು ಯೋಜನೆಗಳ ಪರಿಣಾಮಕಾರಿ ಜಾರಿಯಿಂದ ನಕಲಿ ಫಲಾನುಭವಿಗಳಿಂದ 1,10,000 ಕೋಟಿ ರೂಪಾಯಿ ಸಾರ್ವಜನಿಕ ಹಣವನ್ನು ಉಳಿತಾಯ ಮಾಡಲಾಗಿದೆ ಎಂದು ಹೇಳಿದರು.
ಖಾಸಗಿ ಸುದ್ದಿ ವಾಹಿನಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಹಣವನ್ನು ಲೂಟಿ ಮಾಡುತ್ತಿದ್ದವರನ್ನು ಎಲ್ಲಾ ರೀತಿಯಲ್ಲಿ ತಡೆದಿದ್ದರಿಂದ ಯಾರು ಕೂಡ ಸರ್ಕಾರವನ್ನು ಹಗರಣದಲ್ಲಿ ಸಿಲುಕಿಸಲು ಸಾಧ್ಯವಿಲ್ಲ. ಹಿಂದೆ ಸರ್ಕಾರದಿಂದ 8 ಕೋಟಿ ನಕಲಿ ಫಲಾನುಭವಿಗಳು ಸರ್ಕಾರದ ಸೌಲಭ್ಯವನ್ನು ಪಡೆಯುತ್ತಿದ್ದರು. ನಮ್ಮ ಸರ್ಕಾರ ಅದನ್ನು ನಿಲ್ಲಿಸಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT