ಭಾರತೀಯ ಯೋಧರು 
ದೇಶ

ಉಗ್ರರ ಬಳಿಕ ಪಾಕ್ ಸೇನೆ ಮೇಲೂ ಸರ್ಜಿಕಲ್ ಸ್ಟ್ರೈಕ್: ಪಾಕಿಸ್ತಾನ ಸೇನೆಯ 5 ಪೋಸ್ಟ್ ಗಳು ಧ್ವಂಸ..!

ಬಾಲಾಕೋಟ್ ನಲ್ಲಿನ ಜೈಷ್ ಎ ಮೊಹಮ್ಮದ್ ಉಗ್ರರ ಕ್ಯಾಂಪ್ ಧ್ವಂಸ ಮಾಡಿದ ಬಳಿಕ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿದ್ದ ಪಾಕ್ ಸೇನೆಯ 5 ಪೋಸ್ಟ್ ಗಳ ಮೇಲೂ ಭಾರತೀಯ...

ನವದೆಹಲಿ: ಬಾಲಾಕೋಟ್ ನಲ್ಲಿನ ಜೈಷ್ ಎ ಮೊಹಮ್ಮದ್ ಉಗ್ರರ ಕ್ಯಾಂಪ್ ಧ್ವಂಸ ಮಾಡಿದ ಬಳಿಕ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿದ್ದ ಪಾಕ್ ಸೇನೆಯ 5 ಪೋಸ್ಟ್ ಗಳ ಮೇಲೂ ಭಾರತೀಯ ಯೋಧರು ದಾಳಿ ಮಾಡಿ ಧ್ವಂಸ ಮಾಡಿದ್ದಾರೆ. 
ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಭಾರತದತ್ತ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಮಂಗಳವಾರ ರಾತ್ರಿ ಪಾಕಿಸ್ತಾನ ಸೇನೆಯ 5 ಪೋಸ್ಟ್ ಗಳನ್ನು ಧ್ವಂಸ ಮಾಡಿದೆ. 
ಇನ್ನು ಪಾಕಿಸ್ತಾನ ಪ್ರತೀಕಾರದ ಸೇಡು ತೀರಿಸಿಕೊಳ್ಳಲು ಮುಂದಾದರೆ ಅದಕ್ಕೆ ಸೂಕ್ತ ಕ್ರಮ ಕೈಗೊಂಡಿರುವ ಭಾರತೀಯ ವಾಯುಸೇನೆ ಸಂಭಾವ್ಯ ದಾಳಿಗೆ ಪ್ರತ್ಯುತ್ತರವಾಗಿ ಯುದ್ಧ ವಿಮಾನಗಳು ರನ್ ವೇಯಲ್ಲಿ ಸಜ್ಜಾಗಿ ನಿಂತಿವೆ. 
ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು ಪರಿಣಾಮ ಭಾರತೀಯ ಐವರು ಯೋಧರು ಗಾಯಗೊಂಡಿದ್ದರು. ಇದಕ್ಕೆ ಭಾರತೀಯ ಯೋಧರು ಪ್ರತ್ಯುತ್ತರ ನೀಡಿ ಐದು ಸೇನಾ ಪೋಸ್ಟ್ ಗಳನ್ನು ಧ್ವಂಸ ಮಾಡಿದ್ದು ಪಾಕ್ ಸೈನಿಕರು ಸಾವನ್ನಪ್ಪಿರುವ ಸಾಧ್ಯತೆ ಇದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT