ಸಂಗ್ರಹ ಚಿತ್ರ 
ದೇಶ

ಪುಲ್ವಾಮ ಉಗ್ರದಾಳಿ ಎಫೆಕ್ಟ್: ಎಚ್ಛೆತ್ತ ನವಜೋತ್ ಸಿಂಗ್ ಸಿಧು ವಾಯುದಾಳಿ ಕುರಿತು ಹೇಳಿದ್ದೇನು ಗೊತ್ತಾ?

ಪುಲ್ವಾಮ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಬೆನ್ನಿಗೆ ನಿಂತಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಈಗ ಎಚ್ಚೆತ್ತುಕೊಂಡಿದ್ದು, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆ ನಡೆಸಿದ ವಾಯುದಾಳಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ನವದೆಹಲಿ: ಪುಲ್ವಾಮ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಬೆನ್ನಿಗೆ ನಿಂತಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಈಗ ಎಚ್ಚೆತ್ತುಕೊಂಡಿದ್ದು, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆ ನಡೆಸಿದ ವಾಯುದಾಳಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಪುಲ್ವಾಮ ಉಗ್ರ ದಾಳಿಗೆ ಪ್ರತೀಕಾರವಾಗಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕ್​ನ ಬಾಲಾಕೋಟ್ ನಲ್ಲಿರುವ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಯ ಉಗ್ರರ ಅಡುಗುತಾಣಗಳ ಮೇಲೆ ವೈಮಾನಿಕ ದಾಳಿ ಮಾಡಿದ ಭಾರತೀಯ ಸೇನೆಯ ದಿಟ್ಟತನವನ್ನು ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್​ ಸಚಿವ ನವಜೋತ್ ಸಿಂಗ್​ ಸಿಧು ಅವರು ಶ್ಲಾಘಿಸಿದ್ದಾರೆ.
ಭಾರತದ ವೈಮಾನಿಕ ದಾಳಿಯ ಬಗ್ಗೆ ಹಿಂದಿಯಲ್ಲಿ ಟ್ವೀಟ್​ ಮಾಡಿರುವ ನವಜೋತ್ ಸಿಂಗ್​ ಸಿಧು, 'ಕಬ್ಬಿಣವನ್ನು ಕಬ್ಬಿಣದಿಂದಲೇ ಕತ್ತರಿಸಬೇಕು. ಬೆಂಕಿಯನ್ನು ಬೆಂಕಿಯಿಂದಲೇ ನಂದಿಸಬೇಕು. ಹಾವು ಕಡಿತಕ್ಕೆ ವಿಷವೇ ಔಷಧಿ ಎನ್ನುವ ಹಾಗೇ ಉಗ್ರತ್ವಕ್ಕೆ ದಾಳಿಯಿಂದಲೇ ಉತ್ತರ ನೀಡಬೇಕು ಎಂದು ಸೇನೆಯ ಸಾಮರ್ಥ್ಯವನ್ನು ಶ್ಲಾಘಿಸಿದ್ದಾರೆ.
ಈ ಮೊದಲು ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಮಾತಾನಾಡಿದ್ದ ಸಿಧು, ಇಡೀ ಪಾಕಿಸ್ತಾನವನ್ನು ದೂಷಿಸಬೇಡಿ ಎಂದು ಹೇಳಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ, ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಅವರ ಬೆನ್ನಿಗೆ ನಿಂತು ಈ ವಿಚಾರದಲ್ಲಿ ಶಾಂತಿ ಮಾತುಕತೆ ನಡೆಸಿದರೆ ಉತ್ತಮ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT