ಸಂಗ್ರಹ ಚಿತ್ರ 
ದೇಶ

ಉಗ್ರ ಮಸೂದ್ ಅಜರ್ ಹೆಡೆಮುರಿ ಕಟ್ಟಲು ವೇದಿಕೆ ಸಿದ್ಧ; ಪಾಕ್ ಸರ್ಕಾರಕ್ಕೆ ಡಾಸಿಯರ್ ಹಸ್ತಾಂತರಿಸಿದ ಭಾರತ!

ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೆಡೆಮುರಿ ಕಟ್ಟಲು ಭಾರತ ವೇದಿಕೆ ಸಜ್ಜುಗೊಳಿಸುತ್ತಿದ್ದು, ಇಂದು ಅಧಿಕೃತವಾಗಿ ಪಾಕಿಸ್ತಾನ ಸರ್ಕಾರಕ್ಕೆ ತನ್ನ ರಾಯಭಾರಿ ಮೂಲಕ ಡಾಸಿಯರ್ ಅನ್ನು ಭಾರತ ಸರ್ಕಾರ ಹಸ್ತಾಂತರಿಸಿದೆ.

ನವದೆಹಲಿ: ಒಂದೆಡೆ ಪಾಕಿಸ್ತಾನದ ಯುದ್ಧೋನ್ಮಾದ, ಮತ್ತೊಂದೆಡೆ ಉಗ್ರರ ಕಾಟದ ನಡುವೆಯೂ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೆಡೆಮುರಿ ಕಟ್ಟಲು ಭಾರತ ವೇದಿಕೆ ಸಜ್ಜುಗೊಳಿಸುತ್ತಿದ್ದು, ಇಂದು ಅಧಿಕೃತವಾಗಿ ಪಾಕಿಸ್ತಾನ ಸರ್ಕಾರಕ್ಕೆ ತನ್ನ ರಾಯಭಾರಿ ಮೂಲಕ ಡಾಸಿಯರ್ ಅನ್ನು ಭಾರತ ಸರ್ಕಾರ ಹಸ್ತಾಂತರಿಸಿದೆ.
ಅರೆ ಏನಿದು ಡಾಸಿಯರ್ ಎಂದು ಕೇಳಿದಿರಾ.. ಇಲ್ಲಿದೆ ನಿಮ್ಮ ಪ್ರಶ್ನೆಗೆ ಉತ್ತರ... ಓರ್ವ ವ್ಯಕ್ತಿ, ಅಪರಾಧಿ ಕುರಿತ ಸಾಕ್ಷ್ಯಾಧಾರಗಳ ಸಹಿತದ ಸಂಪೂರ್ಣ ವಿವರಗಳುಳ್ಳ ಕಡತವೇ ಡಾಸಿಯರ್.. ಉಗ್ರ ಮಸೂದ್ ಮತ್ತು ಬಾಲಾಕೋಟ್ ಉಗ್ರ ಕ್ಯಾಂಪ್ ಸೇರಿದಂತೆ ಆತನ ಉಗ್ರ ಚಟುವಟಿಕೆಗಳ ಕುರಿತ ಡಾಸಿಯರ್ ಒಂದನ್ನು ಈ ಹಿಂದೆ ಸ್ವತಃ ವಿಶ್ವಸಂಸ್ಥೆ ಸಿದ್ಧಪಡಿಸಿತ್ತು. 
ಇಂತಹುದೇ ಡಾಸಿಯರ್ ಒಂದನ್ನು ಇದೀಗ ಭಾರತ ಸರ್ಕಾರ ಕೂಡ ಸಿದ್ಧ ಪಡಿಸಿದ್ದು, ಈ ಡಾಸಿಯರ್ ಅನ್ನು ಪಾಕ್ ಸರ್ಕಾರಕ್ಕೆ ಹಸ್ತಾಂತರ ಮಾಡಿದೆ. ಇಷ್ಟು ಭಾರತ ಸರ್ಕಾರ ಸಿದ್ಧ ಪಡಿಸಿರುವ ಡಾಸಿಯರ್ ನಲ್ಲಿ ಏನಿದೆ ಗೊತ್ತಾ..?
ದಿ ಒನ್ ಅಂಡ್ ಓನ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ ಮತ್ತು 44 ಮಂದಿ ಯೋಧರ ಧಾರುಣ ಸಾವಿಗೆ ಕಾರಣವಾದ ಪುಲ್ವಾಮ ಉಗ್ರ ದಾಳಿ ಸಂಪೂರ್ಣ ವಿವರಗಳನ್ನು ಭಾರತ ಸರ್ಕಾರ ತನ್ನ ಡಾಸಿಯರ್ ನಲ್ಲಿ ಅಳವಡಿಸಿದೆ. ಪುಲ್ವಾಮ ಉಗ್ರ ದಾಳಿಯಲ್ಲಿ ತಮಗೆ ದೊರೆತ ಸಾಕ್ಷ್ಯಾಧಾರಗಳನ್ನೂ ಕೂಡ ಡಾಸಿಯರ್ ನಲ್ಲಿ ಲಗತ್ತಿಸಿದೆ. ಪುಲ್ವಾಮ ಉಗ್ರ ದಾಳಿಗೆ ಮಸೂದ್ ಅಜರ್ ನೇರ ಕೈವಾಡದ ಸಾಕ್ಷ್ಯಗಳನ್ನು ಭಾರತ ಲಗತ್ತಿಸಿದೆ ಎನ್ನಲಾಗಿದೆ. 
ಈ ಮಹತ್ವದ ದಾಖಲೆಯನ್ನು ಕೇಂದ್ರ ವಿದೇಶಾಂಗ ಇಲಾಖೆ ಅಧಿಕೃತವಾಗಿ ಪಾಕಿಸ್ತಾನ ಸರ್ಕಾರಕ್ಕೆ ರವಾನೆ ಮಾಡಿರುವುದರಿಂದ ಇದೀಗ ಪಾಕಿಸ್ತಾನ ಸರ್ಕಾರ ಈ ಡಾಸಿಯರ್ ಅನ್ನು ಗಂಭೀರವಾಗಿ ಪರಿಗಣಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಒಂದು ವೇಳೆ ಇದನ್ನು ಪಾಕ್ ಸರ್ಕಾರ ನಿರ್ಲಕ್ಷಿಸಿದ್ದೇ ಆದರೆ ಆಗ ಅದು ವಿಶ್ವಸಂಸ್ಥೆಯ ಮೆಟ್ಟಿಲೇರಲಿದೆ. ಈ ಭಯ ಇದೀಗ ಖಂಡಿತ ಪಾಕಿಸ್ತಾನಕ್ಕೆ ಇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಜಾನೆ ಖಾಲಿ? ಇರಾನ್ ಯುದ್ಧಕ್ಕೆ ಹಣ ನೀಡಲು ಅರಬ್ ರಾಷ್ಟ್ರಗಳಿಗೆ ಅಮೆರಿಕ ಒತ್ತಾಯ..: ವೈಟ್ ಹೌಸ್ ಹೇಳಿದ್ದೇನು?

ಇರಾನ್ ಯುದ್ಧದ ನಡುವೆ ಅಮೆರಿಕಕ್ಕೆ ದೊಡ್ಡ ಹಿನ್ನಡೆ: ತನ್ನ ವಾಯುನೆಲೆ ಬಳಕೆ ನಿರಾಕರಿಸಿದ ಇಟಲಿ!

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಮೂರೇ ತಿಂಗಳಲ್ಲಿ UCC ಜಾರಿ: ಹಿಮಂತ ಶರ್ಮಾ

ತಿರುವಿನಲ್ಲಿ ವೇಗವಾಗಿ ಬಂದ ಬಸ್ ನಿಂದ ಕೆಳಗೆ ಬಿದ್ದ ಯುವತಿಯರು, ಸಿಸಿ ಕ್ಯಾಮೆರಾದಲ್ಲಿ video ಸೆರೆ

ಭಾರತದ ಮೋಸ್ಟ್ ವಾಂಟೆಂಡ್ ಉಗ್ರ: ಪಾಕಿಸ್ತಾನದಲ್ಲಿ JeM ಭಯೋತ್ಪಾದಕ ಮಸೂದ್ ಅಜರ್‌ನ ಸಹೋದರ ನಿಗೂಢ ಸಾವು!

SCROLL FOR NEXT