ಐಎಫ್ ಪೈಲಟ್ ಅಭಿನಂದನ್ ರನ್ನು ತಕ್ಷಣ ಸುರಕ್ಷಿತವಾಗಿ ಬಿಡುಗಡೆಮಾಡಿ: ಪಾಕ್ ಗೆ ಭಾರತ ಒತ್ತಾಯ 
ದೇಶ

ಐಎಫ್ ಪೈಲಟ್ ಅಭಿನಂದನ್ ರನ್ನು ತಕ್ಷಣ ಸುರಕ್ಷಿತವಾಗಿ ಬಿಡುಗಡೆಮಾಡಿ: ಪಾಕ್ ಗೆ ಭಾರತ ಒತ್ತಾಯ

ಪಾಕಿಸ್ತಾನ ವಶದಲ್ಲಿರುವ ಭಾರತೀಯ ಪೈಲಟ್ ಅಭಿನಂದನ್ ವರ್ತಮಾನ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಭಾರತ ಒತ್ತಾಯಿಸಿದೆ.

ನವದೆಹಲಿ: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ಪೈಲಟ್ ಅಭಿನಂದನ್ ವರ್ತಮಾನ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಭಾರತ ಒತ್ತಾಯಿಸಿದೆ.
"ಭಾರತೀಯ ವಾಯುಪಡೆಯ ಗಾಯಗೊಂಡ ಪೈಲಟ್ ಅನ್ನು ಅಸಭ್ಯ ರೀತಿಯಲ್ಲಿ ನಡೆಸಿಕೊಳ್ಳಬೇಡಿ" ಎಂದು ಪಾಕ್ ಗೆ ಭಾರತ ಎಚ್ಚರಿಸಿದೆ. ಅಲ್ಲದೆ ಪಾಕ್ ತಮ್ಮ ಪೈಲಟ್ ಅನ್ನು ವಶಕ್ಕೆ ಪಡೆಯುವ ಮೂಲಕ ಅಂತಾರಾಷ್ಟ್ರೀಯ ಮಾನವೀಯ ಕಾನೂನನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಹೇಳಿದೆ.
ಪಾಕಿಸ್ತಾನದ ಡೆಪ್ಯುಟಿ ಹೈ ಕಮಿಷನರ್ ಸೈಯದ್ ಹೈದರ್ ಷಾ  ಅವರಿಗೆ ಭಾರತ ವಿದೇಶಾಂಗ ಸಚಿವಾಲಯವು ಸಮನ್ಸ್ ನೀಡಿದ್ದು,  ಭಾರತೀಯ ವಾಯುಪಡೆಯ ಪೈಲಟ್ ನೊಡನೆ "ಅಸಭ್ಯ ವರ್ತನೆ" ತೋರುವ ಮೂಲಕ ಅಂತಾರಾಷ್ಟ್ರೀಯ ಮಾನವೀಯ ಕಾನೂನು ಮತ್ತು ಜಿನೀವಾ ಒಪ್ಪಂದದ ನಿಯಮವನ್ನು ಉಲ್ಲಂಘಿಸಿದೆ ಎಂದು ಬಾರತ ಹೇಳಿದೆ.
ಭಾರತದ ಪೈಲಟ್ ಗೆ ಯಾವ ಹಾನಿಯಾಗುವುದಿಲ್ಲ, ಅವರು ಸುರಕ್ಷಿತವಾಗಿ ಹಿಂತಿರುಗುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಭಾರತ ಪಾಕ್ ಗೆ ಸೂಚನೆ ನೀಡಿದೆ.
ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಕ್ಕೆ ಸೇರಿದ್ದ ಎಫ್ -16 ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದ ಬಳಿಕ ಭಾರತ ಹಾಗೂ ಪಾಕಿಸ್ತಾನಗಳು ತಮ್ಮ ತಮ್ಮ ರಾಯಭಾರಿಗಳಿಗೆ ಕದನ ವಿರಾಮ ಉಲ್ಲಂಘನೆ ಕುರಿತು ವಿವರಿಸಿದೆ. ಪಾಕಿಸ್ತಾನದಲ್ಲಿನ ಭಾರತ ಹೈಕಮಿಷನರ್  ಗೌರವ್ ಅಹ್ಲುವಾಲಿಯಾ ಅವರಿಗೆ ಸಮನ್ಸ್ ನೀಡಿದ್ದು ಭಾರತದ ಕದನ ವಿರಾಮ ಉಲ್ಲಂಘನೆ ಕುರಿತು ಆರೋಪಿಸಿದೆ.
ದಕ್ಷಿಣ ಏಷ್ಯಾ ಮತ್ತು ಸಾರ್ಕ್ ಡೈರಕ್ಟರ್ ಜನರಲ್ ಆಗಿರುವ  ಡಾ. ಮೊಹಮ್ಮದ್ ಫೈಸಲ್ ಭಾರತೀಯ ರಾಜತಾಂತ್ರಿಕರಿಗೆ  ಸಮನ್ಸ್  ನೀಡಿ  "2003 ರ ಕದನ ವಿರಾಮ ನಿಯಮವನ್ನು ಗೌರವಿಸಿ, ಭಾರತದ ಪಡೆಗಳು ಗಡಿ ನಿಯಂತ್ರಣ ರೇಖೆಯಲ್ಲಿ  ಶಾಂತಿಯನ್ನು ಕಾಪಾಡಿಕೊಳ್ಳಬೇಕು" ಎಂದು ಹೇಳಿದ್ದಾರೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ. ನೀಡಿದ ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT