ಗಡಿಯಲ್ಲಿ ಗುಂಡಿನ ಚಕಮಕಿ: 3 ದಿನದಲ್ಲಿ 20 ಬಾರಿ ಕದನವಿರಾಮ ಉಲ್ಲಂಘಿಸಿದ ಪಾಕ್ 
ದೇಶ

ಗಡಿಯಲ್ಲಿ ಗುಂಡಿನ ಚಕಮಕಿ: 3 ದಿನದಲ್ಲಿ 20 ಬಾರಿ ಕದನವಿರಾಮ ಉಲ್ಲಂಘಿಸಿದ ಪಾಕ್

ಭಾರತ ವಾಯುಪಡೆ ಪಾಕಿಸ್ತಾನದಲ್ಲಿನ ಉಗ್ರರ ಸಂಹಾರ ಮಾಡಿದ್ದ ಬಳಿಕವೂ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಗುಂಟ ಕದನ ವಿರಾಮ ಉಲ್ಲಂಘಿಸಿ ತನ್ನ ಪುಂಡಾಟಿಕೆ ಮುಂದುವರಿಸಿದೆ.

ಶ್ರೀನಗರ: ಭಾರತ ವಾಯುಪಡೆ ಪಾಕಿಸ್ತಾನದಲ್ಲಿನ ಉಗ್ರರ ಸಂಹಾರ ಮಾಡಿದ್ದ ಬಳಿಕವೂ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಗುಂಟ ಕದನ ವಿರಾಮ ಉಲ್ಲಂಘಿಸಿ ತನ್ನ ಪುಂಡಾಟಿಕೆ ಮುಂದುವರಿಸಿದೆ.
ಕಳೆದ ಮೂರು ದಿನಗಳಿಂದ ಸತತ 20 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗುರುವಾರ ಬೆಳಗ್ಗೆ ಆರು ಗಂಟೆ ಸುಮಾರಿಗೆ ಪಾಕ್ ಪಡೆಗಳು ಭಾರತ್ದ ಮೇಲೆ ಗುಂಡಿನ ದಾಳಿ ನಡೆಸಿದೆ. ಆದರೆ ಈ ದಾಳಿಯಲ್ಲಿ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಅಲ್ಲದೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದೂ ವರದಿಯಾಗಿದೆ.
ಪಾಕ್ ಗುರುವಾರ ಬೆಳಿಗ್ಗೆ ಗಡಿ ಗುಂಟ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೆಂದ್ರ ಆನಂದ್  ಹೇಳಿದ್ದಾರೆ.
ಭಾರತ ಏರ್ ಸ್ಟ್ರೈಕ್ ಬಳಿಕ ಎರಡೂ ದೇಶದ ನಡುವೆ ಯುದ್ಧ ವಾತಾವರಣ ನಿರ್ಮಾಣವಾಗಿದೆ. ಈ ನಡುವೆಯೇ ಪುಂಡ ಪಾಕಿಸ್ತಾನ ಮಾತ್ರ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಕಾಲ್ಕೆರೆದುಕೊಂಡು ಜಗಳಕ್ಕೆ ಬರುತ್ತಿದೆ.
ಇಂದಿನ ಗುಂಡಿನ ದಾಳಿ ಬಳಿಕ ಪೂಂಛ್, ರಜೌರಿ, ಸಾಂಬಾ ಜಿಲ್ಲೆ, ಗಡಿ ನಿಯಂತ್ರಣಾ ರೇಖೆ ಸುತ್ತಮುತ್ತ ಐದು ಕಿಮೀ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳನ್ನುಮುಚ್ಚಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT