ಗಡಿಯಲ್ಲಿ ಗುಂಡಿನ ಚಕಮಕಿ: 3 ದಿನದಲ್ಲಿ 20 ಬಾರಿ ಕದನವಿರಾಮ ಉಲ್ಲಂಘಿಸಿದ ಪಾಕ್ 
ದೇಶ

ಗಡಿಯಲ್ಲಿ ಗುಂಡಿನ ಚಕಮಕಿ: 3 ದಿನದಲ್ಲಿ 20 ಬಾರಿ ಕದನವಿರಾಮ ಉಲ್ಲಂಘಿಸಿದ ಪಾಕ್

ಭಾರತ ವಾಯುಪಡೆ ಪಾಕಿಸ್ತಾನದಲ್ಲಿನ ಉಗ್ರರ ಸಂಹಾರ ಮಾಡಿದ್ದ ಬಳಿಕವೂ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಗುಂಟ ಕದನ ವಿರಾಮ ಉಲ್ಲಂಘಿಸಿ ತನ್ನ ಪುಂಡಾಟಿಕೆ ಮುಂದುವರಿಸಿದೆ.

ಶ್ರೀನಗರ: ಭಾರತ ವಾಯುಪಡೆ ಪಾಕಿಸ್ತಾನದಲ್ಲಿನ ಉಗ್ರರ ಸಂಹಾರ ಮಾಡಿದ್ದ ಬಳಿಕವೂ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಗುಂಟ ಕದನ ವಿರಾಮ ಉಲ್ಲಂಘಿಸಿ ತನ್ನ ಪುಂಡಾಟಿಕೆ ಮುಂದುವರಿಸಿದೆ.
ಕಳೆದ ಮೂರು ದಿನಗಳಿಂದ ಸತತ 20 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗುರುವಾರ ಬೆಳಗ್ಗೆ ಆರು ಗಂಟೆ ಸುಮಾರಿಗೆ ಪಾಕ್ ಪಡೆಗಳು ಭಾರತ್ದ ಮೇಲೆ ಗುಂಡಿನ ದಾಳಿ ನಡೆಸಿದೆ. ಆದರೆ ಈ ದಾಳಿಯಲ್ಲಿ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಅಲ್ಲದೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದೂ ವರದಿಯಾಗಿದೆ.
ಪಾಕ್ ಗುರುವಾರ ಬೆಳಿಗ್ಗೆ ಗಡಿ ಗುಂಟ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೆಂದ್ರ ಆನಂದ್  ಹೇಳಿದ್ದಾರೆ.
ಭಾರತ ಏರ್ ಸ್ಟ್ರೈಕ್ ಬಳಿಕ ಎರಡೂ ದೇಶದ ನಡುವೆ ಯುದ್ಧ ವಾತಾವರಣ ನಿರ್ಮಾಣವಾಗಿದೆ. ಈ ನಡುವೆಯೇ ಪುಂಡ ಪಾಕಿಸ್ತಾನ ಮಾತ್ರ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಕಾಲ್ಕೆರೆದುಕೊಂಡು ಜಗಳಕ್ಕೆ ಬರುತ್ತಿದೆ.
ಇಂದಿನ ಗುಂಡಿನ ದಾಳಿ ಬಳಿಕ ಪೂಂಛ್, ರಜೌರಿ, ಸಾಂಬಾ ಜಿಲ್ಲೆ, ಗಡಿ ನಿಯಂತ್ರಣಾ ರೇಖೆ ಸುತ್ತಮುತ್ತ ಐದು ಕಿಮೀ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳನ್ನುಮುಚ್ಚಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT