ಅಮೃತಸರ: ಭಾರತದ ಹೆಮ್ಮೆಯ ಪುತ್ರ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡುವ ಪಾಕಿಸ್ತಾನದ ಹೇಳಿಕೆ ದೇಶಾದ್ಯಂತ ಸಂಭ್ರಮಕ್ಕೆ ಕಾರಣವಾಗಿದೆ.
ಅಭಿನಂದನ್ ಅವರನ್ನು ನಾಳೆ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳುತ್ತಿದ್ದಂತೆ ಇತ್ತ ಭಾರತದಲ್ಲಿ ಯುದ್ದದಲ್ಲಿ ಗೆದ್ದ ಸಂಭ್ರಮವೇ ಆವರಿಸಿದೆ. ಅಭಿನಂದನ್ ಪರ ಘೋಷಣೆಗಳು ಮುಗಿಲು ಮಟ್ಟಿವೆ.
ಈ ಮಧ್ಯೆ ಅಭಿನಂದನ್ ವರ್ತಮಾನ್ ನಾಳೆ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಹೇಳಿಕೆ ನೀಡಿರುವುದರಿಂದ ತಾವೂ ಸಂತಸಗೊಂಡಿರುವುದಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.