ಸುದ್ದಿಗೋಷ್ಠಿಯಲ್ಲಿ ವಾಯುಸೇನೆಯ ಏರ್ ವೈಸ್ ಮಾರ್ಷಲ್ ಆರ್ ಜಿಕೆ ಕಪೂರ್ 
ದೇಶ

ಏರ್ ಸ್ಟ್ರೈಕ್, ಉಗ್ರರ ಸಾವಿನ ಕುರಿತು ಸಾಕ್ಷಿ ಇದೆ, ಅವುಗಳ ಬಹಿರಂಗ ಸರ್ಕಾರಕ್ಕೆ ಬಿಟ್ಟಿದ್ದು: ವಾಯುಸೇನೆ ತಿರುಗೇಟು

ವಾಯುಸೇನೆ ತಮ್ಮ ದಾಳಿಯ ಕುರಿತ ಸಾಕ್ಷ್ಯಾಧಾರಗಳು ತಮ್ಮ ಬಳಿ ಇದ್ದು, ಅವುಗಳ ಬಹಿರಂಗ ಸರ್ಕಾರ ಮತ್ತು ಸೇನಾ ಮುಖ್ಯಸ್ಥರಿಗೆ ಬಿಟ್ಟಿದ್ದು ಎಂದು ಹೇಳಿದೆ.

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವಾಯುಸೇನೆ ನಡೆಸಿದ ದಾಳಿ ಮತ್ತು ಅವುಗಳಿಂದ ಉಂಟಾದ ಸಾವುನೋವುಗಳ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಖಡಕ್ ತಿರುಗೇಟು ನೀಡಿರುವ ವಾಯುಸೇನೆ ತಮ್ಮ ದಾಳಿಯ ಕುರಿತ ಸಾಕ್ಷ್ಯಾಧಾರಗಳು ತಮ್ಮ ಬಳಿ ಇದ್ದು, ಅವುಗಳ ಬಹಿರಂಗ ಸರ್ಕಾರ ಮತ್ತು ಸೇನಾ ಮುಖ್ಯಸ್ಥರಿಗೆ ಬಿಟ್ಟಿದ್ದು ಎಂದು ಹೇಳಿದೆ.
ಈ ಬಗ್ಗೆ ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಛಿ ವೇಳೆ ಮಾತನಾಡಿದ ವಾಯುಸೇನೆಯ ಏರ್ ವೈಸ್ ಮಾರ್ಷಲ್ ಆರ್ ಜಿಕೆ ಕಪೂರ್ ಅವರು, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವಾಯುಸೇನೆಯ ಜೆಟ್ ಗಳು ಬಾಂಬ್ ದಾಳಿ ನಡೆಸಿದ್ದು ನಿಜ. ಬಾಂಬ್ ದಾಳಿಯಿಂದಾಗಿ ಉಗ್ರರ ಅಡಗುದಾಣಗಳು, ಶಸ್ತ್ರಾಸ್ತ್ರಗಳ ಗೋದಾಮು ಮತ್ತು ಅಪಾರ ಪ್ರಮಾಣದ ಉಗ್ರರು ಹತರಾಗಿದ್ದಾರೆ. ಈ ಕುರಿತ ಎಲ್ಲ ಸಾಕ್ಷ್ಯಾಧಾರಗಳೂ ತಮ್ಮ ಬಳಿ ಇದ್ದು, ಇವುಗಳ ಬಹಿರಂಗ ಪಡಿಸುವುದು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.
ಅಂತೆಯೇ ಪಾಕ್​ ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದೇವೆ ಎಂಬುದಕ್ಕೆ ಸಾಕ್ಷಿ ತೋರಿಸಿದ ವಾಯುಪಡೆಯ ಉಪ ಮುಖ್ಯಸ್ಥ ಕಪೂರ್​ ಅವರು ಪಾಕ್​ ಯುದ್ಧ ವಿಮಾನ ಎಫ್​ 16 ಹೊತ್ತೊಯ್ಯುವ ಆ್ಯಮರಾಮ್ (AMRAAM)​ ಕ್ಷಿಪ್ಪಣಿಯ ಒಂದು ಭಾಗವು ಪೂರ್ವ ರಜೌರಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿಸಿದರು. ಭಾರತದ ಭೂಪ್ರದೇಶದಲ್ಲೇ ಇದು ಕಂಡುಬಂದಿದೆ ಎಂದು ಸಾಕ್ಷಿ ಸಮೇತ ಪಾಕ್​ಗೆ ತಿರುಗೇಟು ನೀಡಿದರು.
'ನಮ್ಮ ಮಿಗ್​-21 ಬೈಸನ್​ ವಿಮಾನದ ಮೇಲೆ ನೆರೆ ರಾಷ್ಟ್ರ ಪಾಕ್​, ಎಫ್​-16 ವಿಮಾನದಿಂದ ದಾಳಿ ಮಾಡಿ, ನಮ್ಮ ಇಬ್ಬರು ಪೈಲಟ್ ಗಳನ್ನು ಹೊರಗೆಳೆದಿದ್ದಾರೆ. ಆದರೆ, ಪಾಕ್ ತನ್ನ​ ಕಾರ್ಯಾಚರಣೆಯಲ್ಲಿ ಎಫ್​-16 ವಿಮಾನವನ್ನು ಬಳಸಿಲ್ಲ ಎಂದು ಸುಳ್ಳು ಹೇಳುತ್ತಿದೆ. ಆದರೆ, ರಜೌರಿಯಲ್ಲಿ ಸಿಕ್ಕಿರುವ ಪಾಕ್​ ಸಹಿ ಇರುವ ಆ್ಯಮರಾಮ್​ ಭಾಗಗಳು ಪಾಕ್​ ಸುಳ್ಳಿಗೆ ಸಾಕ್ಷಿಯಾಗಿದೆ ಎಂದು ಕಪೂರ್​ ತಿಳಿಸಿದರು.
ಇನ್ನು ವಾಯುಸೇನೆಯ ದಾಳಿಯನ್ನು ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಭಾರತೀಯ ವಾಯುಪಡೆ ಪಾಕಿಸ್ತಾನದ ಒಳ ನುಗ್ಗಿ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿದ ನಂತರ ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಸಹ ಕರೆದಿಲ್ಲ. ದಾಳಿಯ ಬಗ್ಗೆ ಯಾವುದೇ ಪಕ್ಷಕ್ಕೂ ಮಾಹಿತಿ ಇಲ್ಲ. ಆ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಮೋದಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

ಗುಜರಾತ್ ಫ್ಲೋರೋ ಕೆಮಿಕಲ್ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆ: ಓರ್ವ ಸಾವು, 12 ಮಂದಿ ಆಸ್ಪತ್ರೆಗೆ ದಾಖಲು

SCROLL FOR NEXT