ಇಶ್ರಾತ್ ಜಹಾನ್ ಪ್ರಕರಣದ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಬಡ್ತಿ! 
ದೇಶ

ಇಶ್ರಾತ್ ಜಹಾನ್ ಪ್ರಕರಣದ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಬಡ್ತಿ!

ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಗುಜರಾತ್ ಸರ್ಕಾರ ಬಡ್ತಿ ನೀಡಿದೆ.

ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪೊಲೀಸ್ ಅಧಿಕಾರಿಗೆ ಗುಜರಾತ್ ಸರ್ಕಾರ ಬಡ್ತಿ ನೀಡಿದೆ. 
ಜಿಎಲ್ ಸಿಂಘಾಲ್ ಇಶ್ರಾತ್ ಜಹಾನ್ ಪ್ರಕರಣದಲ್ಲಿ ಆರೋಪಿಯಾಗಿದ್ದರು.  ಗಾಂಧಿ ನಗರದ ಕಮಾಂಡೋ ತರಬೇತಿ ಕೇಂದ್ರದಲ್ಲಿ ಉಪ ಇನ್ಸ್ಪೆಕ್ಟರ್ ಜನರಲ್ ಆಗಿದ್ದ ಜಿಎಲ್ ಸಿಂಘಾಲ್ ಅವರನ್ನು ಐಜಿ ಹುದ್ದೆಗೆ ಬಡ್ತಿ ನೀಡಿ ನೇಮಕ ಮಾಡಿ ಗುಜರಾತ್ ಸರ್ಕಾರ ಆದೇಶ ಹೊರಡಿಸಿದೆ. 
ಅಷ್ಟೇ ಅಲ್ಲದೇ ಸೋಹ್ರಾಬುದ್ದೀನ್ ಶೇಖ್ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಖುಲಾಸೆಯಾಗಿದ್ದ ವಿಫುಲ್ ಅಗರ್ವಾಲ್ ಅವರಿಗೂ ಸಹ ಬಡ್ತಿ ನೀಡಲಾಗಿದ್ದು, ಅಹ್ಮದಾಬಾದ್ ನ ಜಂಟಿ ಪೊಲೀಸ್ ಆಯುಕ್ತರನ್ನಾಗಿ(ಆಡಳಿತ) ನೇಮಕ ಮಾಡಲಾಗಿದೆ. 
ಇಶ್ರಾತ್ ಜಹಾನ್ ಪ್ರಕರಣದಲ್ಲಿ ಸಿಂಘಾಲ್ ಅವರನ್ನು ಫೆ.2013 ರಲ್ಲಿ ಬಂಧಿಸಲಾಗಿತ್ತು. ಸಿಬಿಐ ಕೋರ್ಟ್ ನಿಂದ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ 2014 ರ ಮೇ ನಲ್ಲಿ ಅವರನ್ನು ರಾಜ್ಯ ಅಪರಾಧ ದಾಖಲಾತಿ ಬ್ಯುರೋ ಎಸ್ ಪಿ ಹುದ್ದೆಯಲ್ಲಿ ಮುಂದುವರೆಸಲಾಗಿತ್ತು.  ಇನ್ನು ವಿಫುಲ್ ಅಗರ್ವಾಲ್ ಅವರನ್ನು 2014 ರ ನವೆಂಬರ್ ನಲ್ಲಿ ಹುದ್ದೆಗೆ ಮರುನೇಮಕಾತಿ ಮಾಡಿಕೊಳ್ಳಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT