ರಾಹುಲ್ ಗಾಂಧಿ 
ದೇಶ

ಕಾಂಗ್ರೆಸ್ ಪಕ್ಷದ 10 ಹೊಸ ರಾಷ್ಟ್ರೀಯ ವಕ್ತಾರರನ್ನು ನೇಮಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷದ 10 ಹೊಸ ರಾಷ್ಟ್ರೀಯ ವಕ್ತಾರರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇಮಕ ಮಾಡಿದ್ದಾರೆ. ಈ ಪೈಕಿ ಕೆಲವರು ಈಗಾಗಲೇ ಮಾಧ್ಯಮ ಸಮಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ನವದೆಹಲಿ: ಕಾಂಗ್ರೆಸ್ ಪಕ್ಷದ 10 ಹೊಸ ರಾಷ್ಟ್ರೀಯ ವಕ್ತಾರರನ್ನು  ಎಐಸಿಸಿ  ಅಧ್ಯಕ್ಷ ರಾಹುಲ್ ಗಾಂಧಿ ನೇಮಕ ಮಾಡಿದ್ದಾರೆ. ಈ ಪೈಕಿ ಕೆಲವರು ಈಗಾಗಲೇ ಮಾಧ್ಯಮ ಸಮಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ರಾಜ್ಯಸಭಾ ಸಂಸದ ಸಯ್ಯದ್  ನಾಸೀರ್ ಹುಸೇನ್,  ಪವನ್ ಖೇರಾ, ಜೈವೀರ್ ಶೆರ್ಗಿಲ್,  ರಾಗಿಣಿ ನಾಯಕ್, ಗೌರವ್ ವಲ್ಲಭ್ ಮತ್ತು ರಾಜೀವ್ ತ್ಯಾಗಿ  ಹೊಸ ರಾಷ್ಟ್ರೀಯ ವಕ್ತಾರರಾಗಿ ನೇಮಕಗೊಂಡಿದ್ದಾರೆ.

ಉತ್ತರ ಪ್ರದೇಶ ಮುಖಂಡ ಅಖಿಲೇಶ್ ಪ್ರತಾಪ್ ಸಿಂಗ್, ಸುನೀಲ್ ಅಹಿರ್, ಹಿನಾ ಕಾವಾರೆ, ಮತ್ತು ಶ್ರವಣ್ ದಾಸೋಜು ಕೂಡಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ನೇಮಕವಾಗಿದ್ದಾರೆ.

ಎಐಸಿಸಿಯಲ್ಲಿ ಈಗಾಗಲೇ 9 ಉನ್ನತ ಮಟ್ಟದ ನಾಯಕರು  ಹಿರಿಯ ವಕ್ತಾರರನ್ನಾಗಿ ಹಾಗೂ 26 ಮಂದಿ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಮಾ ಮೊಹಮ್ಮದ್, ಐಶ್ವರ್ಯ ಮಹಾದೇವ್, ಅದಿಲ್ ಬೊಪಾರೈ, ಅಮಾನ್ ಪವರ್, ಸಂಜಯ್ ಚೊಕರ್, ಅನಿಲ್  ಧಂತೊರಿ ಮತ್ತಿತರನ್ನು ಹೊಸ ಮಾಧ್ಯಮ ಪದಾಧಿಕಾರಿಗಳಾಗಿ ರಾಹುಲ್ ಗಾಂಧಿ ನೇಮಿಸಿದ್ದಾರೆ.

ಇವರಲ್ಲದೇ ಸಂಜಯ್ ಸಿಂಗ್ ಅವರನ್ನು  ರಾಷ್ಟ್ರೀಯ ಮಾಧ್ಯಮ ಸಮನ್ವಯಕಾರರ ಮುಖ್ಯಸ್ಥರನ್ನಾಗಿ ಮತ್ತು ಮನೋಜ್ ತ್ಯಾಗಿ, ಮೊಹಮ್ಮದ್ ಖಾನ್ ಅವರನ್ನು  ರಾಷ್ಟ್ರೀಯ ಮಾಧ್ಯಮ ಸಮನ್ವಯಕಾರರಾಗಿ  ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT