ಲಖನೌ: ಬುಲಂದ್ ಶೆಹರ್ ಪೊಲೀಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಕಲೌವಾ ಎಂಬ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ. ಹಿಂಸಾಚಾರದ ವೇಳೆ ಈತ ಕೂಡ ಸ್ಥಳದಲ್ಲಿದ್ದ ಎಂಬ ಖಚಿತ ಮಾಹಿತ ಲಭ್ಯವಾದ ಹಿನ್ನಲೆಯಲ್ಲಿ ಆತನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರಭಾಕರ್ ಚೌಧರಿಯವರು ಹೇಳಿದ್ದಾರೆ.
ಹಿಂಸಾಚಾರದ ವೇಳೆ ಪೊಲೀಸ್ ಅಧಿಕಾರಿ ತಲೆಗೆ ಮಾರಾಕಾಸ್ತ್ರಗಳಿಂಗ ಕಲೌವಾ ಬಲವಾಗಿ ಹೊಡೆದಿದ್ದ. ಬಳಿಕ ಅಧಿಕಾರಿ ಮೇಲೆ ಗುಂಡು ಹಾರಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಪ್ರಸ್ತುತ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದ್ದು ವಿಚಾರಣೆಗೊಳಪಡಿಸಲಾಗಿದೆ ಎಂದಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಉತ್ತರಪ್ರದೇಶದ ಬುಲಂದ್ಶೆಹರ್ ನಲ್ಲಿ ಗೋಹತ್ಯೆ ಸಂಬಂಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಪೊಲೀಸ್ ಠಾಣೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದರು, ಪರಿಣಾಮ ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಅವರು ಮೃತಪಟ್ಟಿದ್ದರು.
ಪ್ರಕರಣ ಸಂಬಂಧ ಡಿಸೆಂಬರ್ 28 ರಂದು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು. ಪ್ರಕರಣ ಸಂಬಂಧ ಈವರೆಗೂ ಪೊಲೀಸರು 30 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos