ಸಂಗ್ರಹ ಚಿತ್ರ 
ದೇಶ

ಜನರು ನಮ್ಮನ್ನು ನೋಡಿ ನಗುತ್ತಿದ್ದಾರೆ, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ: ರಾಜ್ಯಸಭೆ ಗದ್ದಲ ಕುರಿತು ಸಭಾಪತಿ

ಸಂಸತ್ತಿನಲ್ಲಿ ನಾಯಕರ ಗದ್ದಲವನ್ನು ನೋಡಿ ಜನರು ನಗುತ್ತಿದ್ದಾರೆ, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ ಎಂದು ರಾಜ್ಯಸಭೆಯಲ್ಲಿ ಮುಂದುವರೆದ ಗದ್ದಲ ಕುರಿತು ಸಭಾಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ತೀವ್ರ...

ನವದೆಹಲಿ: ಸಂಸತ್ತಿನಲ್ಲಿ ನಾಯಕರ ಗದ್ದಲವನ್ನು ನೋಡಿ ಜನರು ನಗುತ್ತಿದ್ದಾರೆ, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ ಎಂದು ರಾಜ್ಯಸಭೆಯಲ್ಲಿ ಮುಂದುವರೆದ ಗದ್ದಲ ಕುರಿತು ಸಭಾಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ತ್ರಿವಳಿ ತಲಾಖ್ ಹಾಗೂ ವಂದೇ ಮಾತರಂ ವಿವಾದ ಸಂಬಂಧ ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಉಂಟಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಭಾಪತಿಗಳು ಪದೇ ಪದೇ ಅಧಿವೇಶನವನ್ನು ಮುಂದೂಡುತ್ತಿದ್ದಾರೆ. 
ಪದೇ ಪದೇ ಗದ್ದಲ ಎದುರಾಗುತ್ತಿರುವ ಹಿನ್ನಲೆಯಲ್ಲಿ ತೀವ್ರ ಬೇಸರ ವ್ಯಕ್ತಪಡಿಸಿರುವ ವೆಂಕಯ್ಯ ನಾಯ್ಡು ಅವರು, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ. ನಮ್ಮನ್ನು ನೋಡಿ ಜನರು ನಗುತ್ತಿದ್ದಾರೆಂದು ಹೇಳುವ ಮೂಲಕ ಪ್ರತಿಭಟನೆಗಿಳಿದಿದ್ದ ಹಲವು ಸಂಸದರನ್ನು ಮೌನವಾಗಿರುವಂತೆ ಮಾಡಿದರು. 
ರಾಜ್ಯಸಭೆ ಕಲಾಪ ಸುಗಮವಾಗಿ ಸಾಗಲು ದಯವಿಟ್ಟು ಸಹಕರಿಸಿ. ಅಧಿವೇಶನ ಅರ್ಥಪೂರ್ಣವಾಗಿ ಸಾಗಬೇಕು. ಹಲವು ವಿಚಾರಗಳ ಬಗ್ಗೆ ಚರ್ಚೆಗಳು ಬಾಕಿಯಿದೆ. ಸಮಸ್ಯೆಗಳನ್ನು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT