ಸಂಗ್ರಹ ಚಿತ್ರ 
ದೇಶ

ಭಕ್ತರ ಭದ್ರತೆ ಮಾತ್ರ ಪೊಲೀಸರ ಹೊಣೆ, ಅವರ ವಯಸ್ಸಿನ ಪರಿಶೀಲನೆ ನಮ್ಮ ಜವಾಬ್ದಾರಿಯಲ್ಲ: ಕೇರಳ ಡಿಜಿಪಿ

ಶಬರಿಮಲೆಗೆ ಆಗಮಿಸುವ ಭಕ್ತರ ಭದ್ರತೆ ಮಾತ್ರ ಪೊಲೀಸರ ಹೊಣೆ, ಅವರ ವಯಸ್ಸಿನ ಪರಿಶೀಲನೆ ನಮ್ಮ ಜವಾಬ್ದಾರಿಯಲ್ಲ ಎಂದು ಕೇರಳ ಡಿಜಿಪಿ ಲೋಕನಾಥ್ ಬೆಹೆರಾ ಹೇಳಿದ್ದಾರೆ.

ಕೊಚ್ಚಿ: ಶಬರಿಮಲೆಗೆ ಆಗಮಿಸುವ ಭಕ್ತರ ಭದ್ರತೆ ಮಾತ್ರ ಪೊಲೀಸರ ಹೊಣೆ, ಅವರ ವಯಸ್ಸಿನ ಪರಿಶೀಲನೆ ನಮ್ಮ ಜವಾಬ್ದಾರಿಯಲ್ಲ ಎಂದು ಕೇರಳ ಡಿಜಿಪಿ ಲೋಕನಾಥ್ ಬೆಹೆರಾ ಹೇಳಿದ್ದಾರೆ.
ಖ್ಯಾತ ಧಾರ್ಮಿಕ ತಾಣ ಶಬರಿಮಲೆಯಲ್ಲಿ ಮಹಿಳೆಯರು ಪ್ರವೇಶ ಮಾಡಿ ಅಯ್ಯಪ್ಪ ದರ್ಶನ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇರಳ ಡಿಜಿಪಿ ಲೋಕನಾಥ್ ಬೆಹೆರಾ ಅವರು, ಶಬರಿಮಲೆಯಲ್ಲಿ ಎಲ್ಲ ರೀತಿಯ ಭದ್ರತೆ ನಿಯೋಜನೆ ಮಾಡಲಾಗಿದೆ. ಭದ್ರತೆಯಲ್ಲಿ ಯಾವುದೇ ರೀತಿಯ ಲೋಪದೋಷಗಳಾಗಿಲ್ಲ. ಶಬರಿಮಲೆಗೆ ಆಗಮಿಸುವ ಭಕ್ತರಿಗೆ ಭದ್ರತೆ ನೀಡುವುದು ನಮ್ಮ ಜವಾಬ್ದಾರಿ.. ಆದರೆ ಭಕ್ತರ ವಯಸ್ಸಿನ ಪರಿಶೀಲನೆ ನಮ್ಮ ಹೊಣೆಯಲ್ಲ ಎಂದು ಹೇಳಿದ್ದಾರೆ.
ಇನ್ನು ಶಬರಿಮಲೆಗೆ ಮಹಿಳೆಯರು ಪ್ರವೇಶ ಮಾಡಿದ ಬೆನ್ನಲ್ಲೇ ಶಬರಿಮಲೆ ಗಿರಿಯಾದ್ಯಂತ ಭಾರಿ ಪ್ರಮಾಣದಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಶಬರಿಮಲೆ ದೇಗುಲಕ್ಕೆ ಮಹಿಳೆಯ ಪ್ರವೇಶ ವಿರೋಧಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುವ ಶಂಕೆ ಮೇರೆಗೆ ಶಬರಿಮಲೆಯಲ್ಲಿ ಭದ್ರತಾ ಸಿಬ್ಬಂದಿಗಳ ಸಂಖ್ಯೆಯನ್ನುಗಣನೀಯ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT