ಸಂಗ್ರಹ ಚಿತ್ರ 
ದೇಶ

ಮೇಕೆದಾಟು: ಲೋಕಸಭೆಯಲ್ಲಿ ಎಐಎಡಿಎಂಕೆ ಪುಂಡಾಟ, 26 ಸಂಸದರ ಅಮಾನತು!

ಮೇಕೆದಾಟು ಯೋಜನೆಯನ್ನು ವಿರೋಧಿಸಿ ಎಐಎಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಪುಂಡಾಟ ನಡೆಸಿದ್ದು ಇದರಿಂದ ಕೆರಳಿದ ಸ್ಪಿಕರ್ ಸುಮಿತ್ರಾ ಮಹಾಜನ್ ಅವರು 26 ಸಂಸದರನ್ನು ಅಮಾನತು...

ನವದೆಹಲಿ: ಮೇಕೆದಾಟು ಯೋಜನೆಯನ್ನು ವಿರೋಧಿಸಿ ಎಐಎಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಪುಂಡಾಟ ನಡೆಸಿದ್ದು ಇದರಿಂದ ಕೆರಳಿದ ಸ್ಪಿಕರ್ ಸುಮಿತ್ರಾ ಮಹಾಜನ್ ಅವರು 26 ಸಂಸದರನ್ನು ಅಮಾನತು ಮಾಡಿದ್ದಾರೆ. 
ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿತ್ತು. ಇದನ್ನು ಸಹಿಸದ ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಿತ್ತು. ಇಂದು ನಡೆದ ಲೋಕಸಭೆ ಕಲಾಪದ ಸಮಯದಲ್ಲಿ ಎಐಎಡಿಎಂಕೆ ಪಕ್ಷದ 26 ಸಂಸದರು ಗಲಾಟೆ ಮಾಡಿದ್ದರು. ಈ ವೇಳೆ ಸ್ಪಿಕರ್ ಸುಮಿತ್ರ ಮಹಾಜನ್ ಅವರು ಸಂಸತ್ ಕಲಾಪಕ್ಕೆ ಅಡ್ಡಿ ಪಡಿಸಿದ ಆರೋಪದ ಹಿನ್ನೆಲೆಯಲ್ಲಿ 26 ಸಂಸದರನ್ನು ಅಮಾನತು ಮಾಡಿದ್ದಾರೆ. 
ಸ್ಪಿಕರ್ ಅವರು ಎಐಎಡಿಎಂಕೆ 26 ಸಂಸದರನ್ನು ಮುಂದಿನ 5 ಕಲಾಪಗಳಿಗೆ ಹಾಜರಾಗದಂತೆ ಅಮಾನತು ಮಾಡಿದ್ದಾರೆ. ಇನ್ನು ಎಐಎಡಿಎಂಕೆ ಸಂಸದರನ್ನು ಅಮಾನತು ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ಸಂಸದ ಮತ್ತು ಲೋಕಸಭೆ ಡೆಪ್ಯುಟಿ ಸ್ಪಿಕರ್ ಎಂ ತಂಬಿದೊರೈ ಅವರು, ಸದ್ಯದಲ್ಲೇ ಲೋಕಸಭೆ ಚುನಾವಣೆ ಬರುತ್ತಿದ್ದು ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಲುವಾಗಿ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 
ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿ ನಾವು ಪ್ರತಿಭಟನೆಗಳನ್ನು ನಡೆಸುತ್ತಿದ್ದೇವೆ. ಪ್ರತಿಭಟನೆಯು ನಮ್ಮ ಪ್ರಜಾಪ್ರಭುತ್ವ ಹಕ್ಕು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರುತ್ತಿಲ್ಲ ಎಂದು ತಂಬಿದೊರೈ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT