ಸಂಗ್ರಹ ಚಿತ್ರ 
ದೇಶ

ಮೇಕೆದಾಟು: ಲೋಕಸಭೆಯಲ್ಲಿ ಎಐಎಡಿಎಂಕೆ ಪುಂಡಾಟ, 26 ಸಂಸದರ ಅಮಾನತು!

ಮೇಕೆದಾಟು ಯೋಜನೆಯನ್ನು ವಿರೋಧಿಸಿ ಎಐಎಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಪುಂಡಾಟ ನಡೆಸಿದ್ದು ಇದರಿಂದ ಕೆರಳಿದ ಸ್ಪಿಕರ್ ಸುಮಿತ್ರಾ ಮಹಾಜನ್ ಅವರು 26 ಸಂಸದರನ್ನು ಅಮಾನತು...

ನವದೆಹಲಿ: ಮೇಕೆದಾಟು ಯೋಜನೆಯನ್ನು ವಿರೋಧಿಸಿ ಎಐಎಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಪುಂಡಾಟ ನಡೆಸಿದ್ದು ಇದರಿಂದ ಕೆರಳಿದ ಸ್ಪಿಕರ್ ಸುಮಿತ್ರಾ ಮಹಾಜನ್ ಅವರು 26 ಸಂಸದರನ್ನು ಅಮಾನತು ಮಾಡಿದ್ದಾರೆ. 
ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿತ್ತು. ಇದನ್ನು ಸಹಿಸದ ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಿತ್ತು. ಇಂದು ನಡೆದ ಲೋಕಸಭೆ ಕಲಾಪದ ಸಮಯದಲ್ಲಿ ಎಐಎಡಿಎಂಕೆ ಪಕ್ಷದ 26 ಸಂಸದರು ಗಲಾಟೆ ಮಾಡಿದ್ದರು. ಈ ವೇಳೆ ಸ್ಪಿಕರ್ ಸುಮಿತ್ರ ಮಹಾಜನ್ ಅವರು ಸಂಸತ್ ಕಲಾಪಕ್ಕೆ ಅಡ್ಡಿ ಪಡಿಸಿದ ಆರೋಪದ ಹಿನ್ನೆಲೆಯಲ್ಲಿ 26 ಸಂಸದರನ್ನು ಅಮಾನತು ಮಾಡಿದ್ದಾರೆ. 
ಸ್ಪಿಕರ್ ಅವರು ಎಐಎಡಿಎಂಕೆ 26 ಸಂಸದರನ್ನು ಮುಂದಿನ 5 ಕಲಾಪಗಳಿಗೆ ಹಾಜರಾಗದಂತೆ ಅಮಾನತು ಮಾಡಿದ್ದಾರೆ. ಇನ್ನು ಎಐಎಡಿಎಂಕೆ ಸಂಸದರನ್ನು ಅಮಾನತು ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ಸಂಸದ ಮತ್ತು ಲೋಕಸಭೆ ಡೆಪ್ಯುಟಿ ಸ್ಪಿಕರ್ ಎಂ ತಂಬಿದೊರೈ ಅವರು, ಸದ್ಯದಲ್ಲೇ ಲೋಕಸಭೆ ಚುನಾವಣೆ ಬರುತ್ತಿದ್ದು ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಲುವಾಗಿ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 
ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿ ನಾವು ಪ್ರತಿಭಟನೆಗಳನ್ನು ನಡೆಸುತ್ತಿದ್ದೇವೆ. ಪ್ರತಿಭಟನೆಯು ನಮ್ಮ ಪ್ರಜಾಪ್ರಭುತ್ವ ಹಕ್ಕು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರುತ್ತಿಲ್ಲ ಎಂದು ತಂಬಿದೊರೈ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT