ಶಬರಿಮಲೆ ಪ್ರತಿಭಟನೆ: 48 ಗಂಟೆಗಳಲ್ಲಿ 266 ಬಂಧನ ಮುನ್ನೆಚ್ಚರಿಕ ಕ್ರಮವಾಗಿ 334 ಜನ ವಶಕ್ಕೆ! 
ದೇಶ

ಶಬರಿಮಲೆ ಪ್ರತಿಭಟನೆ: 48 ಗಂಟೆಗಳಲ್ಲಿ 266 ಬಂಧನ ಮುನ್ನೆಚ್ಚರಿಕ ಕ್ರಮವಾಗಿ 334 ಜನ ವಶಕ್ಕೆ!

ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ನಿರ್ಬಂಧಿತ ವಯಸ್ಸಿನ ಮಹಿಳೆಯರು ಪ್ರವೇಶಮಾಡಿದ ನಂತರ ಕೇರಳದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪ್ರತಿಭಟನೆ ಹಿಂಸಾಚಾರದ ರೂಪ ಪಡೆಯುವುದನ್ನು ತಡೆಗಟ್ಟಲು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ನಿರ್ಬಂಧಿತ ವಯಸ್ಸಿನ ಮಹಿಳೆಯರು ಪ್ರವೇಶಮಾಡಿದ ನಂತರ ಕೇರಳದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪ್ರತಿಭಟನೆ ಹಿಂಸಾಚಾರದ ರೂಪ ಪಡೆಯುವುದನ್ನು ತಡೆಗಟ್ಟಲು ಪೊಲೀಸರು ಹಲವು ಕ್ರಮ ಕೈಗೊಂಡಿದ್ದಾರೆ. 
ಹಿಂಸಾಚಾರದ ಪ್ರತಿಭಟನೆಯಲ್ಲಿ ತೊಡಗಿರುವವರನ್ನು ಪೊಲೀಸರು ಮುಲಾಜಿಲ್ಲದೇ ಬಂಧಿಸಿದ್ದು, ಈ ರೀತಿಯ ಪ್ರತಿಭಟನೆಯಲ್ಲಿ ತೊಡಗಿ ಬಂಧನಕ್ಕೊಳಗಾದ ಪ್ರತಿಭಟನಾಕಾರರ ಸಂಖ್ಯೆ 48 ಗಂಟೆಗಳಲ್ಲಿ 266 ಕ್ಕೆ ಏರಿಕೆಯಾಗಿದೆ.  ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬರೊಬ್ಬರಿ 334 ಜನರನ್ನು ವಶಕ್ಕೆ ಪಡೆದಿದ್ದಾರೆ. 
ಹಿಂದೂ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆಯ ನಂತರ ಹಿಂಸಾಚಾರವಾಗಿರುವ ಬಗ್ಗೆ ವರದಿಗಳು ಪ್ರಕಟವಾಗಿದ್ದು, ಈ ರೀತಿಯ ಪ್ರತಿಭಟನೆಯನ್ನು ಹತ್ತಿಕ್ಕುವುದಕ್ಕಾಗಿ ಕೇರಳ ರಾಜ್ಯ ಪೊಲೀಸರು ಆಪರೇಷನ್ ಬ್ರೋಕನ್ ವಿಂಡೋ ಎಂಬ ಕಾರ್ಯಾಚಾರಣೆಯನ್ನು ಪ್ರಾರಂಭಿಸಿದ್ದಾರೆ. 
ಕಾರ್ಯಾಚರಣೆಯ ಭಾಗವಾಗಿ ಹಿಂಸಾಚಾರದಲ್ಲಿ ತೊಡಗಿರುವ ಪ್ರತಿಭಟನಾ ನಿರತರನ್ನು ಬಂಧಿಸುವುದಷ್ಟೇ ಅಲ್ಲದೇ ಅವರ ಮೊಬೈಲ್ ಫೋನ್ ಗಳನ್ನು ವಶಕ್ಕೆ ತೆಗೆದುಕೊಂಡು ಡಿಜಿಟಲ್ ಪರಿಶೀಲನೆಗೆ ನೀಡಲಾಗುತ್ತದೆ ಹಾಗೂ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಶಂಕೆಯಿಂದ ಪ್ರತಿಭಟನಾಕಾರರ ಮನೆಗಳ ಮೇಲೆ ದಾಳಿಯನ್ನೂ ನಡೆಸಲಾಗುತ್ತದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 
ಇನ್ನು ಸಾಮಾಜಿಕ ಜಾಲತಾಣದಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡುವವರ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಕೇರಳ ಪೊಲೀಸ್ ಇಲಾಖೆ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT