ದೇಶ

ಕಾಶ್ಮೀರ: ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Lingaraj Badiger
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿರುವುದಾಗಿ ಭಾರತೀಯ ಸೇನೆ ತಿಳಿಸಿದೆ.
ಅರಣ್ಯದಲ್ಲಿ ಕನಿಷ್ಠ ಇಬ್ಬರು ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸೇನೆ, ತ್ರಾಲ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿತ್ತು. 
ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಪ್ರತಿದಾಳಿ ನಡೆಸಿದ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೇನಾ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ ಕಾರ್ಯಾಚರಣೆ ವೇಳೆ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಹತ್ಯೆಯಾದ ಉಗ್ರರನ್ನು ಜುಬೈರ್ ಅಹ್ಮದ್ ಭಟ್, ಶಾಕೂರ್ ಅಹ್ಮದ್ ಪರ್ಯಾ ಅಲಿಯಾಸ್ ಜಾಫರ್ ಹಾಗೂ ತವ್ಸೀಪ್ ಅಹ್ಮದ್ ಥಾಕೂರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
SCROLL FOR NEXT