ಸಂಗ್ರಹ ಚಿತ್ರ 
ದೇಶ

46 ವರ್ಷದ ಶ್ರೀಲಂಕಾ ಮಹಿಳೆ ಶಬರಿಮಲೆ ಪ್ರವೇಶಿಸಿ ಅಯ್ಯಪ್ಪ ದರ್ಶನ ಮಾಡಿದ್ದಾರೆ: ಕೇರಳ ಪೊಲೀಸರ ಸ್ಪಷ್ಟನೆ

ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದೀಗ ಶ್ರೀಲಂಕಾದ 46 ವರ್ಷದ ಮಹಿಳೆಯೊಬ್ಬರು ಅಯ್ಯಪ್ಪ ದರ್ಶನ ಪಡೆದ ಮೂರನೇ ಮಹಿಳೆಯಾಗಿದ್ದಾರೆ ಎಂದು ಹೇಳಲಾಗಿದೆ.

ಕೊಚ್ಚಿ: ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದೀಗ ಶ್ರೀಲಂಕಾದ 46 ವರ್ಷದ ಮಹಿಳೆಯೊಬ್ಬರು ಅಯ್ಯಪ್ಪ ದರ್ಶನ ಪಡೆದ ಮೂರನೇ ಮಹಿಳೆಯಾಗಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಸ್ವತಃ ಕೇರಳ ಪೊಲೀಸ್ ಇಲಾಖೆಯೇ ಸ್ಪಷ್ಟನೆ ನೀಡಿದ್ದು, ಶುಕ್ರವಾರ ಬೆಳಗ್ಗೆ 46 ವರ್ಷದ ಶ್ರೀಲಂಕಾ ಮೂಲದ ಮಹಿಳೆ ಶಶಿಕಲಾ ಎಂಬುವವರು ಶಬರಿಮಲೆಯಲ್ಲಿರುವ ಪವಿತ್ರ ಸನ್ನಿಧಾನಂಗೆ ಪ್ರವೇಶ ಮಾಡಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ ಎಂದು ಹೇಳಿದ್ದಾರೆ. 
ಮಹಿಳೆ ಶಬರಿಮಲೆಗೆ ತೆರಳಿದ ವಿಚಾರ ವೈರಲ್ ಆಗುತ್ತಿದ್ದಂತೆಯೇ ಪಂಪಾ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮಹಿಳೆ ಶಶಿಕಲಾ ಅವರು, 'ನನ್ನನ್ನು ಪೊಲೀಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ. ನಾನು ಅಯ್ಯಪ್ಪನ ನಿಜವಾದ ಭಕ್ತೆ. 48 ದಿನ ಮಾಲೆ ಧರಿಸಿ ದೇವರನ್ನು ಆರಾಧಿಸಿದ್ದೇನೆ. ನಾನು ಯಾರಿಗೂ ಭಯಪಡಲಾರೆ. ಅವರೇಕೆ ನನ್ನನ್ನು ತಡೆಯಬೇಕು. ನನ್ನ ಬಳಿ ವೈದ್ಯಕೀಯ ದಾಖಲೆಗಳಿವೆ. 48 ವರ್ಷ ಪೂರೈಸಿರುವ ನನ್ನ ಗರ್ಭಕೋಶವನ್ನು ಕಾರಣಾಂತರಗಳಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆದು ಹಾಕಲಾಗಿದೆ. ಈ ಬಗ್ಗೆ ನಾನು ವೈದ್ಯಕೀಯ ದಾಖಲೆ ಹೊಂದಿದ್ದೇನೆ. ಆದರೂ ನನ್ನನ್ನು ದೇವರ ದರ್ಶನಕ್ಕೆ ಬಿಡಲಿಲ್ಲ' ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಈ ಬಗ್ಗೆ ಮಾತನಾಡಿರುವ ಶಶಿಕಲಾ ಪತಿ, ದೇಗುಲಕ್ಕೆ ಇನ್ನು ಒಂದು ಕಿಲೋಮೀಟರ್​ ಇರುವಾಗಲೇ ಮರಕೂಟಮ್​ ಎಂಬಲ್ಲಿ ನಮ್ಮನ್ನು ತಡೆಯಲಾಯಿತು. ಹೀಗಾಗಿ ನಾನು ನನ್ನ ಮಗ ಮಾತ್ರ ದರ್ಶನ ಪಡೆದೆವು. ಶಶಿಕಲಾ ಹಿಂದಕ್ಕೆ ಹೋದರು ಎಂದು ಅವರು ಹೇಳಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ಪಷ್ಟನೆ ನೀಡಿರುವ ಕೇರಳ ಪೊಲೀಸರು, ದೇಗುಲದ ಸಿಸಿಟಿವಿಯಲ್ಲಿ ಶ್ರೀಲಂಕಾದ ಮಹಿಳೆ ದೇಗುಲ ಪ್ರವೇಶ ಮಾಡಿ ಅಯ್ಯಪ್ಪನ ದರ್ಶನ ಪಡೆದಿರುವುದು ಖಚಿತವಾಗಿದೆ. ಈ ವಿಚಾರದಲ್ಲಿ ಯಾವುದೇ ರೀತಿಯ ವಿವಾದ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬುಧವಾರವಷ್ಟೇ ಇದೇ ಕೇರಳದ ಬಿಂದು ಮತ್ತು ಕನಕ ಎಂಬ ಮಹಿಳೆಯರು ವಿರೋಧದ ನಡುವೆಯೂ ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆದಿದ್ದರು. ಈ ಘಟನೆ ಬಳಿಕ ಕೇರಳದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರ ಆಕ್ರೋಶ ಮುಗಿಲುಮಟ್ಟಿದ್ದು, ಕೇರಳ ಬೂದಿ ಮುಚ್ಚಿದ ಕೆಂಡದಂತಿದೆ. ಕೇರಳದಾದ್ಯಂತ ಹಿಂದೂಪರ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT