ನಿರ್ಮಲಾ ಸೀತಾರಾಮನ್ 
ದೇಶ

ರಾಫೆಲ್ ವಿವಾದ: ರಕ್ಷಣೆಯಲ್ಲಿ ಡೀಲ್ ಮಾಡುತ್ತೇವೆ, ರಕ್ಷಣಾ ಡೀಲ್ ಮಾಡಲ್ಲ - ಸೀತಾರಾಮನ್

ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್....

ನವದೆಹಲಿ: ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕಾಂಗ್ರೆಸ್ ಸತ್ಯಕ್ಕೆ ಹೆದರುತ್ತದೆ ಎಂದು ಶುಕ್ರವಾರ ಹೇಳಿದ್ದಾರೆ.
ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಇಂದು ಲೋಕಸಭೆಯಲ್ಲಿ ಮಾಹಿತಿ ನೀಡಿದ ರಕ್ಷಣಾ ಸಚಿವೆ, ರಾಷ್ಟ್ರೀಯ ಭದ್ರತೆ ಅತ್ಯಂತ ಮಹತ್ವದ್ದು. ಅಂಕಿ, ಅಂಶಗಳಿಂದ ನಾವು ಓಡಿ ಹೋಗುತ್ತಿಲ್ಲ ಎಂದರು.
ಸೆಪ್ಟೆಂಬರ್ 2019ರಲ್ಲಿ ಮೊದಲ ರಾಫೆಲ್ ಯುದ್ಧ ವಿಮಾನದ ಡೆಲಿವೆರಿ ಆಗಲಿದೆ. ನಂತರ 2022ರ ವೇಳೆಗೆ ಎಲ್ಲಾ 36 ವಿಮಾನಗಳು ಡೆಲಿವೆರಿ ಆಗಲಿದೆ. 14 ತಿಂಗಳಲ್ಲಿ ರಾಫೆಲ್ ಒಪ್ಪಂದದ ಮಾತುಕತೆ ಮುಗಿದಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದಾರೆ.
ನಾವು ಉತ್ತರ ಮತ್ತು ಪಶ್ಚಿಮ ಗಡಿಗಳಲ್ಲಿ ಯುದ್ಧಗಳನ್ನು ಹೊಂದಿದ್ದೇವೆ. ಹೀಗಾಗಿ ಸಕಾಲಕ್ಕೆ ರಕ್ಷಣಾ ಸಾಮಾಗ್ರಿ ಖರೀದಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದರು.
ಚೀನಾ ಮತ್ತು ಪಾಕಿಸ್ತಾನ ದೊಡ್ಡ ದೊಡ್ಡ ಫ್ಲೀಟ್ ನಿರ್ಮಿಸುತ್ತಿವೆ. ಯುಪಿಎ ಸರ್ಕಾರ ಕೇವಲ 18 ಯುದ್ಧ ವಿಮಾನ ಖರೀದಿಸಲು ಬಯಸಿತ್ತು ಮತ್ತು ಅದು ಸಹ ನೆನೆಗುದಿಗೆ ಬಿದ್ದಿತು ಎಂದು ರಕ್ಷಣಾ ಸಚಿವೆ ದೂರಿದ್ದಾರೆ.
ರಕ್ಷಣಾ ಒಪ್ಪಂದಕ್ಕೂ ಮತ್ತು ರಕ್ಷಣೆಯಲ್ಲಿ ಒಪ್ಪಂದಕ್ಕೂ ಬಹಳ ವ್ಯತ್ಯಾಸವಿದೆ. ನಾವು ರಕ್ಷಣಾ ಡೀಲ್ ಮಾಡುತ್ತಿಲ್ಲ. ರಾಷ್ಟ್ರೀಯ ಭದ್ರತೆಗೆ ಆದ್ಯತೆ ನೀಡುವುದಕ್ಕಾಗಿ ರಕ್ಷಣೆಯಲ್ಲಿ ಡೀಲ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT