ಸಾಂದರ್ಭಿಕ ಚಿತ್ರ 
ದೇಶ

ಕಡಲೂರು ಅತ್ಯಾಚಾರ ಪ್ರಕರಣ: ಚರ್ಚ್ ಪಾದ್ರಿಗೆ 30 ವರ್ಷ ಜೈಲು

2014ರಲ್ಲಿ ತಮಿಳುನಾಡಿನ ಕಡಲೂರು ಜಿಲ್ಲೆಯ ತಿತಕುಡಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ....

ಕಡಲೂರು: 2014ರಲ್ಲಿ ತಮಿಳುನಾಡಿನ ಕಡಲೂರು ಜಿಲ್ಲೆಯ ತಿತಕುಡಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಲೂರು ಜಿಲ್ಲಾ ಮಹಿಳಾ ಕೋರ್ಟ್ ಚರ್ಚ್ ಪಾದ್ರಿಗೆ 30 ವರ್ಷ ಹಾಗೂ ಇತರೆ ಒಂಬತ್ತು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಹಾಗೂ ಮಾನವ ಕಳ್ಳಸಾಗಣೆ ಆರೋಪ ಎದುರಿಸುತ್ತಿದ್ದ 17 ಆರೋಪಿಗಳ ಪೈಕಿ ಪಾದ್ರಿ ಸೇರಿದಂತೆ 16 ಆರೋಪಿಗಳು ತಪ್ಪಿತಸ್ಥರು ಎಂದು ಕೋರ್ಟ್ ಶುಕ್ರವಾರ ತೀರ್ಪು ನೀಡಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು. ಓರ್ವ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ.
ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದ ಮಹಿಳಾ ಕೋರ್ಟ್ ನ್ಯಾಯಾಧೀಶ ಟಿ ಲಿಂಗೇಶ್ವರನ್ ಅವರು, ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಚರ್ಚ್ ಪಾದ್ರಿ ಅರುಲ್ಡೋಸ್ ಅವರಿಗೆ 30 ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರುಪಾಯಿ ದಂಡ ವಿಧಿಸಿದ್ದಾರೆ.
ಮಾನವ ಕಳ್ಳಸಾಗಣೆಯ ಕಿಂಗ್ ಪಿನ್ ಅನ್ಬಗಳನ್ ಗೆ ಜೀವವಿರುವವರೆಗೆ ಜೈಲು ಶಿಕ್ಷೆ ಹಾಗೂ 3.21 ಲಕ್ಷ ರುಪಾಯಿ ಜೈಲು ಶಿಕ್ಷೆ ವಿಧಿಸಲಾಗಿದೆ. ಅನಂದರಾಜ್ ಗೆ ನಾಲ್ಕು ಜೀವಾವಧಿ ಶಿಕ್ಷೆ, ಸೇಲ್ವರಾಜ್ ಗೆ ಮೂರು ಹಾಗೂ ಮಹೋನ್ ರಾಜ್ ಮತ್ತು ಮತಿವನನ್ ಗೆ ಎರಡು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಫಾತಿಮಾ ಎಂಬ ಮಹಿಳೆ ಎರಡು ಜೀವಾವಧಿ ಹಾಗೂ ಮಕ್ಕಳನ್ನು ರಾಜ್ಯದ ವಿವಿಧ ಸ್ಥಳಗಳಿಗೆ ಸಾಗಿಸುತ್ತಿದ್ದ ಚಾಲಕ ಶ್ರೀಧರ್ ಗೆ ಎರಡು ಜೀವಾವಧಿ ಶಿಕ್ಷೆ ಮತ್ತು 4.4 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ.
ತಿತಿಕುಡಿಯ 13 ವರ್ಷದ ಹಾಗೂ 14 ವರ್ಷದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರ ಎಸಗಲಾಗಿದೆ. ಅಲ್ಲದೆ ಬಾಲಕಿಯರನ್ನು ಸೇಲಂ, ಪನ್ರುತಿ ಹಾಗೂ ವಡಲೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT