ಸಾಂದರ್ಭಿಕ ಚಿತ್ರ 
ದೇಶ

ಕಡಲೂರು ಅತ್ಯಾಚಾರ ಪ್ರಕರಣ: ಚರ್ಚ್ ಪಾದ್ರಿಗೆ 30 ವರ್ಷ ಜೈಲು

2014ರಲ್ಲಿ ತಮಿಳುನಾಡಿನ ಕಡಲೂರು ಜಿಲ್ಲೆಯ ತಿತಕುಡಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ....

ಕಡಲೂರು: 2014ರಲ್ಲಿ ತಮಿಳುನಾಡಿನ ಕಡಲೂರು ಜಿಲ್ಲೆಯ ತಿತಕುಡಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಲೂರು ಜಿಲ್ಲಾ ಮಹಿಳಾ ಕೋರ್ಟ್ ಚರ್ಚ್ ಪಾದ್ರಿಗೆ 30 ವರ್ಷ ಹಾಗೂ ಇತರೆ ಒಂಬತ್ತು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಹಾಗೂ ಮಾನವ ಕಳ್ಳಸಾಗಣೆ ಆರೋಪ ಎದುರಿಸುತ್ತಿದ್ದ 17 ಆರೋಪಿಗಳ ಪೈಕಿ ಪಾದ್ರಿ ಸೇರಿದಂತೆ 16 ಆರೋಪಿಗಳು ತಪ್ಪಿತಸ್ಥರು ಎಂದು ಕೋರ್ಟ್ ಶುಕ್ರವಾರ ತೀರ್ಪು ನೀಡಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು. ಓರ್ವ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ.
ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದ ಮಹಿಳಾ ಕೋರ್ಟ್ ನ್ಯಾಯಾಧೀಶ ಟಿ ಲಿಂಗೇಶ್ವರನ್ ಅವರು, ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಚರ್ಚ್ ಪಾದ್ರಿ ಅರುಲ್ಡೋಸ್ ಅವರಿಗೆ 30 ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರುಪಾಯಿ ದಂಡ ವಿಧಿಸಿದ್ದಾರೆ.
ಮಾನವ ಕಳ್ಳಸಾಗಣೆಯ ಕಿಂಗ್ ಪಿನ್ ಅನ್ಬಗಳನ್ ಗೆ ಜೀವವಿರುವವರೆಗೆ ಜೈಲು ಶಿಕ್ಷೆ ಹಾಗೂ 3.21 ಲಕ್ಷ ರುಪಾಯಿ ಜೈಲು ಶಿಕ್ಷೆ ವಿಧಿಸಲಾಗಿದೆ. ಅನಂದರಾಜ್ ಗೆ ನಾಲ್ಕು ಜೀವಾವಧಿ ಶಿಕ್ಷೆ, ಸೇಲ್ವರಾಜ್ ಗೆ ಮೂರು ಹಾಗೂ ಮಹೋನ್ ರಾಜ್ ಮತ್ತು ಮತಿವನನ್ ಗೆ ಎರಡು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಫಾತಿಮಾ ಎಂಬ ಮಹಿಳೆ ಎರಡು ಜೀವಾವಧಿ ಹಾಗೂ ಮಕ್ಕಳನ್ನು ರಾಜ್ಯದ ವಿವಿಧ ಸ್ಥಳಗಳಿಗೆ ಸಾಗಿಸುತ್ತಿದ್ದ ಚಾಲಕ ಶ್ರೀಧರ್ ಗೆ ಎರಡು ಜೀವಾವಧಿ ಶಿಕ್ಷೆ ಮತ್ತು 4.4 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ.
ತಿತಿಕುಡಿಯ 13 ವರ್ಷದ ಹಾಗೂ 14 ವರ್ಷದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರ ಎಸಗಲಾಗಿದೆ. ಅಲ್ಲದೆ ಬಾಲಕಿಯರನ್ನು ಸೇಲಂ, ಪನ್ರುತಿ ಹಾಗೂ ವಡಲೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT