ಪ್ರಿಯಾ ದತ್ 
ದೇಶ

2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ರಾಹುಲ್ ಗಾಂಧಿಗೆ ಪ್ರಿಯಾ ದತ್ ಪತ್ರ

2019ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ' ಎಂದು ಮಾಜಿ ಸಂಸದೆ ಪ್ರಿಯಾ ದತ್‌ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಗೆ ಪತ್ರ ಬರೆದಿದ್ದಾರೆ...

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ  ನಾನು ಸ್ಪರ್ಧಿಸುವುದಿಲ್ಲ' ಎಂದು ಮಾಜಿ ಸಂಸದೆ ಪ್ರಿಯಾ ದತ್‌ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಗೆ ಪತ್ರ ಬರೆದಿದ್ದಾರೆ.
ಪಕ್ಷದ ಮುಂಬಯಿ ಘಟಕದೊಳಗೆ ಪರಸ್ಪರ ವಿರೋಧಿ ಬಣಗಳ ನಡುವಿನ ಕಚ್ಚಾಟಕ್ಕೆ ಬೇಸತ್ತು ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ' ಎಂದು ಪ್ರಿಯಾ ದತ್‌ ಅವರು ರಾಹುಲ್‌ ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್‌ ಪಕ್ಷದೊಳಗಿನ ಬಣ ಸಂಘರ್ಷವನ್ನು ಪ್ರಶ್ನಿಸಿರುವ ಅವರು, 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ  ಸೋಲನುಭವಿಸಿದ್ದ ಸಂದರ್ಭದಲ್ಲಿ 'ಪಕ್ಷದ ಸೋಲಿಗೆ ಆಂತರಿಕ ಸಂಘರ್ಷವೇ ಕಾರಣ ಎಂದು ಟೀಕಿಸಿದ್ದರು.. 
ಕಾಂಗ್ರೆಸ್‌ ಪಕ್ಷದ ನಿರಂತರ ಸೋಲುಗಳಿಗೆ ಅದರ ಅಂತರಿಕ ಕಲಹ ಕಾರಣ. ಅದಕ್ಕೆ ಸೂಕ್ತ ಚಿಕಿತ್ಸೆ ನೀಡುವ ಅಗತ್ಯವಿದೆ. ಇಲ್ಲದಿದ್ದರೆ ಈ ರೀತಿಯ ಸೋಲುಗಳು ಹೀಗೆಯೇ ಮುಂದವರಿಯಲಿವೆ' ಎಂದು ಪ್ರಿಯಾ ದತ್‌ ಟ್ವಿಟರ್‌ನಲ್ಲಿ ಅಂದಿನ ದಿನಗಳಲ್ಲಿ ಬರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT