ಸಾಂದರ್ಭಿಕ ಚಿತ್ರ 
ದೇಶ

ದಿಢೀರ್ ಹರತಾಳ ನಡೆಸುವಂತಿಲ್ಲ, 7 ದಿನ ಮುಂಚೆ ನೋಟಿಸ್ ನೀಡಬೇಕು: ಕೇರಳ ಹೈಕೋರ್ಟ್

ಪದೇಪದೆ ಹರತಾಳ, ಪ್ರತಿಭಟನೆಯಿಂದ ತತ್ತರಿಸಿ ಹೋಗಿರುವ ದೇವರ ನಾಡು ಕೇರಳ ಜನತೆಗೆ ಹೈಕೋರ್ಟ್ ಸ್ವಲ್ಪ...

ತಿರುವನಂತಪುರಂ: ಪದೇಪದೆ ಹರತಾಳ, ಪ್ರತಿಭಟನೆಯಿಂದ ತತ್ತರಿಸಿ ಹೋಗಿರುವ ದೇವರ ನಾಡು ಕೇರಳ ಜನತೆಗೆ ಹೈಕೋರ್ಟ್ ಸ್ವಲ್ಪ ರಿಲೀಫ್ ನೀಡಿದ್ದು, ರಾಜ್ಯದಲ್ಲಿ ದಿಢೀರ್ ಹರತಾಳ ನಡೆಸುವುದನ್ನು ನಿಷೇಧಿಸಿ ಸೋಮವಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ದಿಢೀರ್ ಹರತಾಳ ನಿಷೇಧಿಸಬೇಕು ಎಂದು ಕೋರಿ ಕೇರಳ ವಾಣಿಜ್ಯ ಮಂಡಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಯಾವುದೇ ಸಂಘಟನೆಗಳು ಮತ್ತು ಪಕ್ಷಗಳು ದಿಢೀರ್ ಹರತಾಳಕ್ಕೆ ಕರೆ ನೀಡುವಂತಿಲ್ಲ. ಒಂದು ವೇಳೆ ಹರತಾಳ ನಡೆಸುವುದಾದರೆ ಕನಿಷ್ಠ ಏಳು ದಿನ ಮುಂಚಿತವಾಗಿಯೇ ನೋಟಿಸ್ ನೀಡಬೇಕು ಎಂದು ಆದೇಶಿಸಿದೆ.
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಮತ್ತು ಕೆಲ ಮಹಿಳೆಯರು ದೇಗುಲ ಪ್ರವೇಶಿಸಿದ ಕಾರಣಕ್ಕೆ ರಾಜ್ಯದಲ್ಲಿ ಸರಣಿ ಹರತಾಳ ನಡೆಯುತ್ತಿದ್ದು, ಇದರಿಂದಾಗಿ 2018ರಲ್ಲಿ 97 ಕೆಲಸದ ದಿನಗಳು ನಷ್ಟವಾಗಿವೆ. ಹರತಾಳದಿಂದ ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮ ಭಾರಿ ನಷ್ಟ ಅನುಭವಿಸಿದೆ. ಹೀಗಾಗಿ ದಿಢೀರ್ ಹರತಾಳ ನಿಷೇಧಿಸಬೇಕು ಎಂದು ವಾಣಿಜ್ಯ ಮಂಡಳಿ ಮನವಿ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT