ದೇಶ

'ರಾಜ್ಯ ಹಾಳು ಮಾಡುತ್ತಿದ್ದೀರ': ಭಾರತ್ ಬಂದ್ ಗೆ ದೀದಿ ಕೆಂಡಾಮಂಡಲ!

Srinivas Rao BV
ಕೋಲ್ಕತ್ತಾ: ಕೇಂದ್ರ ಸರ್ಕಾರದ ಮಸೂದೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ  ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂದ್ ವಿರುದ್ಧ ಕಿಡಿ ಕಾರಿದ್ದಾರೆ. 
ಬಂದ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಮತಾ ಬ್ಯಾನರ್ಜಿ, ಬಂದ್ ವಿಷಯವಾಗಿ ಒಂದೇ ಒಂದು ಅಕ್ಷರವನ್ನೂ ಮಾತಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಪಶ್ಚಿಮ ಬಂಗಾಳದಲ್ಲಿ ನಮ್ಮ ಸರ್ಕಾರ ಬಂದ್ ನ್ನು ಬೆಂಬಲಿಸದೇ ಇರಲು ತೀರ್ಮಾನಿಸಿದೆ, ಕಳೆದ 34 ವರ್ಷಗಳಿಂದ ರಾಜ್ಯದಲ್ಲಿ ಎಡಪಕ್ಷಗಳು ಬಂದ್ ಮೇಲೆ ಬಂದ್ ಗೆ ಕರೆ ನೀಡಿ ರಾಜ್ಯವನ್ನು ಹಾಳುಮಾಡಿವೆ, ಇನ್ನು ಸಾಕು ಯಾವುದೇ ಬೆಂದ್ ಗೆ ಬೆಂಬಲ ನೀಡುವುದಿಲ್ಲ ಯಾವುದೇ ಬಂದ್ ಇರುವುದಿಲ್ಲ ಎಂದು ಮಾಧ್ಯಮಗಳಿಗೆ ಮಮತಾ ಬ್ಯಾನರ್ಜಿ ಸ್ಪಷ್ಟವಾಗಿ ತಿಳಿಸಿದ್ದಾರೆ. 
SCROLL FOR NEXT