ಸಂಸತ್ತು 
ದೇಶ

ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದ ಮುಸ್ಲಿಯೇತರ ವಲಸಿಗರಿಗೆ ಭಾರತದ ಪೌರತ್ವ ಒದಗಿಸುವ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರ ಪಡೆಯಿತು.

ನವದೆಹಲಿ: ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದ ಮುಸ್ಲಿಯೇತರ ವಲಸಿಗರಿಗೆ  ಭಾರತದ ಪೌರತ್ವ ಒದಗಿಸುವ  ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರ ಪಡೆಯಿತು.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ-2019ರ ಮಂಡಿಸಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್ ,ಈ ಮಸೂದೆ ಸಂವಿಧಾನದಲ್ಲಿನ ವಿನಾಯಿತಿಗಳಿಗೆ ವಿರುದ್ಧವಾಗಿಲ್ಲ, ಮೂರು ನೆರೆಯ ರಾಷ್ಟ್ರಗಳಲ್ಲಿ ನೋವುಂಡ  ಅಲ್ಪಸಂಖ್ಯಾತರಿಗೆ ನೆರವು ನೀಡಲಿದೆ ಎಂದು ಹೇಳಿದರು.

ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದಿಂದ ವಲಸೆ ಬಂದು ಆರು ವರ್ಷಗಳಿಂದ ಭಾರತದಲ್ಲಿ ನೆಲೆಸಿರುವ  ಹಿಂದೂಗಳು, ಜೈನರು, ಕ್ರಿಶ್ಚಿಯನ್, ಸಿಖ್, ಬೌದ್ದರು ಹಾಗೂ ಪಾರ್ಸಿಯನ್ನರು ಯಾವುದೇ ದಾಖಲೆ ಹೊಂದಿದ್ದರೂ ಸಹ ಈ ಮಸೂದೆ ಭಾರತದ ಪೌರತ್ವವನ್ನು ನೀಡಲಿದೆ ಎಂದರು.

ಭಾರತ ಹೊರತುಪಡಿಸಿದರೆ ಬೇರೆಡೆಗೆ ಹೋಗಲು ಅವರಿಗೆ ಅವಕಾಶ ಇಲ್ಲ. ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಸೇರಿದಂತೆ ಅನೇಕ ನಾಯಕರು ನೆರೆಯ ರಾಷ್ಟ್ರಗಳ ನೊಂದ ಅಲ್ಪಸಂಖ್ಯಾತ ಜನರಿಗೆ ಆಶ್ರಯ ಒದಗಿಸುವ ಮನೋಭಾವ ಹೊಂದಿದ್ದರು ಎಂದು ರಾಜನಾಥ್ ಸಿಂಗ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT