ಸಂಸತ್ತು 
ದೇಶ

ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದ ಮುಸ್ಲಿಯೇತರ ವಲಸಿಗರಿಗೆ ಭಾರತದ ಪೌರತ್ವ ಒದಗಿಸುವ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರ ಪಡೆಯಿತು.

ನವದೆಹಲಿ: ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದ ಮುಸ್ಲಿಯೇತರ ವಲಸಿಗರಿಗೆ  ಭಾರತದ ಪೌರತ್ವ ಒದಗಿಸುವ  ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರ ಪಡೆಯಿತು.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ-2019ರ ಮಂಡಿಸಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್ ,ಈ ಮಸೂದೆ ಸಂವಿಧಾನದಲ್ಲಿನ ವಿನಾಯಿತಿಗಳಿಗೆ ವಿರುದ್ಧವಾಗಿಲ್ಲ, ಮೂರು ನೆರೆಯ ರಾಷ್ಟ್ರಗಳಲ್ಲಿ ನೋವುಂಡ  ಅಲ್ಪಸಂಖ್ಯಾತರಿಗೆ ನೆರವು ನೀಡಲಿದೆ ಎಂದು ಹೇಳಿದರು.

ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದಿಂದ ವಲಸೆ ಬಂದು ಆರು ವರ್ಷಗಳಿಂದ ಭಾರತದಲ್ಲಿ ನೆಲೆಸಿರುವ  ಹಿಂದೂಗಳು, ಜೈನರು, ಕ್ರಿಶ್ಚಿಯನ್, ಸಿಖ್, ಬೌದ್ದರು ಹಾಗೂ ಪಾರ್ಸಿಯನ್ನರು ಯಾವುದೇ ದಾಖಲೆ ಹೊಂದಿದ್ದರೂ ಸಹ ಈ ಮಸೂದೆ ಭಾರತದ ಪೌರತ್ವವನ್ನು ನೀಡಲಿದೆ ಎಂದರು.

ಭಾರತ ಹೊರತುಪಡಿಸಿದರೆ ಬೇರೆಡೆಗೆ ಹೋಗಲು ಅವರಿಗೆ ಅವಕಾಶ ಇಲ್ಲ. ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಸೇರಿದಂತೆ ಅನೇಕ ನಾಯಕರು ನೆರೆಯ ರಾಷ್ಟ್ರಗಳ ನೊಂದ ಅಲ್ಪಸಂಖ್ಯಾತ ಜನರಿಗೆ ಆಶ್ರಯ ಒದಗಿಸುವ ಮನೋಭಾವ ಹೊಂದಿದ್ದರು ಎಂದು ರಾಜನಾಥ್ ಸಿಂಗ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT