ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 
ದೇಶ

ನೊಂದಿದ್ದ ರೈತರು ಇತ್ತೀಚಿನ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ: ರಾಹುಲ್

ಕೇಂದ್ರ ಸರ್ಕಾರದ ಕಾರ್ಯವೈಖರಿಯಿಂದ ಸಾಕಷ್ಟು ನೊಂದಿದ್ದ ರೈತರು ಇತ್ತೀಚಿನ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯವೇನೆಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತೋರಿಸಿದ್ದಾರೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ...

ಜೈಪುರ: ಕೇಂದ್ರ ಸರ್ಕಾರದ ಕಾರ್ಯವೈಖರಿಯಿಂದ ಸಾಕಷ್ಟು ನೊಂದಿದ್ದ ರೈತರು ಇತ್ತೀಚಿನ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯವೇನೆಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತೋರಿಸಿದ್ದಾರೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ. 
ರಾಜಸ್ಥಾನದಲ್ಲಿ ಸರ್ಕಾರ ರಚನೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಜೈಪುರದಲ್ಲಿ ರೈತ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಸರ್ಕಾರದ ಕಾರ್ಯ ವೈಖರಿಯಿಂದ ಬೇಸರಗೊಂಡಿದ್ದ ರೈತರು ಮೂರು ರಾಜ್ಯಗಳಲ್ಲಿ ತಮ್ಮ ಶಕ್ತಿಯೇನೆಂಬುದನ್ನು ಪ್ರಧಾನಿ ಮೋದಿಗೆ ತೋರಿಸಿದ್ದಾರೆ. ರಾಜಸ್ಥಾನದಲ್ಲಿ ಆಡಳಿತ ನಡೆಸುತ್ತಿದ್ದರೂ ಬಿಜೆಪಿ ತನ್ನ ಅಧಿಕಾರವನ್ನು ಕಳೆದುಕೊಂಡಿತು ಎಂದು ಹೇಳಿದ್ದಾರೆ. 
ಇದೇ ವೇಳೆ ಮುಂಬರುವ ಲೋಕಸಭಾ ಚುನಾವಣೆ 2019ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದೇ ಆದರೆ, ದೇಶದಲ್ಲಿರೂವ ಪ್ರತೀ ರಾಜ್ಯದಲ್ಲಿಯೂ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ. 
ಬಳಿಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತಂತೆ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ಚೌಕಿದಾರ್ ಲೋಕಸಭೆಯಲ್ಲಿ ಒಂದು ನಿಮಿಷ ನಿಂತು ರಫೇಲ್ ವಿಚಾರ ಕುರಿತು ಚರ್ಚೆ ನಡೆಸಲು ಸಿದ್ಧರಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!