ಸಾಂದರ್ಭಿಕ ಚಿತ್ರ 
ದೇಶ

ಬುಲಂದ್ ಶಹರ್ ಹಿಂಸಾಚಾರ: ಪ್ರಮುಖ ಆರೋಪಿ ಬಿಜೆಪಿ ಯುವ ಮೋರ್ಚಾ ಮುಖಂಡ ಅರೆಸ್ಟ್

: ಬುಲಂದ್ ಶಹರ್ ನ ಸಿಯಾನಾ ಹಿಂಸಾಚಾರ ಪ್ರಕರಣದ ಪ್ರಧಾನ ಆರೋಪಿ ಬಿಜೆಪಿ ಯುವ ಮೋರ್ಚಾ ನಾಯಕ ಶಿಖರ್ ಅಗರ್ ವಾಲ್ ಅವರನ್ನು ಪೊಲೀಸರು ಹರ್ ಪುರ್ ...

ಲಕ್ನೋ: ಬುಲಂದ್ ಶಹರ್ ನ ಸಿಯಾನಾ ಹಿಂಸಾಚಾರ ಪ್ರಕರಣದ ಪ್ರಧಾನ ಆರೋಪಿ ಬಿಜೆಪಿ ಯುವ ಮೋರ್ಚಾ ನಾಯಕ ಶಿಖರ್ ಅಗರ್ ವಾಲ್ ಅವರನ್ನು ಪೊಲೀಸರು ಹರ್ ಪುರ್ ನಲ್ಲಿ ಬಂಧಿಸಿದ್ದಾರೆ.
ಬುಲಂದ್ ಶಹರ್ ಹಿಂಸಾಚಾರ ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಸಿಂಗ್ ಅವರ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಶಿಖರ್ ಪ್ರಮುಖನಾಗಿದ್ದಾನೆ. 
ಗೋಹತ್ಯೆಗೆ ಸಂಬಂಧಿಸಿದಂತೆ ಬುಲಂದ್ ಶಹರ್ ನಲ್ಲಿ ಕಳೆದ ವರ್ಷದ ಡಿಸೆಂಬರ್ 3ರಂದು ನಡೆದಿದ್ದ ಹಿಂಸಾಚಾರದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಸಿಂಗ್ ಅವರನ್ನು ಕೊಲ್ಲಲಾಗಿತ್ತು, ಇದಕ್ಕೆ ಶಿಖರ್ ಅಗರ್ ವಾಲ್ ಕುಮ್ಮಕ್ಕು ನೀಡಿದ್ದ ಎನ್ನಲಾಗಿದೆ,
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೂನ್ ಮತ್ತು ಪ್ರಶಾಂತ್ ನಾಥ್ ಎಂಬುವರನ್ನು ಬಂಧಿಸಲಾಗಿತ್ತು,ಗಲಭೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಮುಂದಾದ ಸುಬೋಧ್ ಅವರಿಗೆ ಕಲ್ಲು ತೂರಾಟ  ನಡೆಸಲಾಗಿತ್ತು, ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಅವರನ್ನು ಹಿಂಬಾಲಿಸಿದ ಗಲಭೆಕೋರರು ಅವರಿಗೆ ಶೂಟ್ ಮಾಡಿದ್ದರು. 
ಕಳೆದವಾರ ಪ್ರಕರಣದ ಪ್ರಮುಕ ಆರೋಪಿ  ಯೋಗೇಶ್ ರಾಜ್ ಎಂಬಾತನನ್ನು ಬಂಧಿಸಲಾಗಿತ್ತು, ದೆಹಲಿಯಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ, ವಿಚಾರಣೆ ವೇಳೆ ಪೊಲೀಸ್ ಅಧಿಕಾರಿಗೆ ಗುಂಜು ಹಾರಿಸಿದ್ದು ತಾನೇ ಎಂದು ತಪ್ಪೊಪ್ಪಿಕೊಂಡಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT