ಕ್ರಿಶ್ಚಿಯನ್ ಮೈಕೆಲ್ 
ದೇಶ

ವಿವಿಐಪಿ ಕ್ಯಾಪ್ಟರ್ ಹಗರಣ: ಕುಟುಂಬಕ್ಕೆ ಫೋನ್ ಮಾಡಲು ಅನುಮತಿ ಕೋರಿದ ಕ್ರಿಶ್ಚಿಯನ್ ಮೈಕೆಲ್

ಬಹುಕೋಟಿ ವಿವಿಐಪಿ ಕ್ಯಾಪ್ಟರ್ ಹಗರಣದ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್....

ನವದೆಹಲಿ: ಬಹುಕೋಟಿ ವಿವಿಐಪಿ ಕ್ಯಾಪ್ಟರ್ ಹಗರಣದ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿದೇಶದಲ್ಲಿರುವ ತನ್ನ ಕುಟುಂಬಕ್ಕೆ ಹಾಗೂ ತನ್ನ ವಕೀಲರಿಗೆ ಫೋನ್ ಮಾಡಲು ಅನುಮತಿ ನೀಡಬೇಕು ಎಂದು ದೆಹಲಿ ಕೋರ್ಟ್ ಗೆ ಮನವಿ ಮಾಡಿದ್ದಾರೆ.
ಸದ್ಯ ತಿಹಾರ್ ಜೈಲಿನಲ್ಲಿರುವ ಮೈಕೆಲ್ ತನ್ನ ವಕೀಲರ ಮೂಲಕ ಸಿಬಿಐ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕುಟುಂಬಕ್ಕೆ ಫೋನ್ ಮಾಡಲು ಜೈಲು ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ ಎಂದು ದೂರಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕಳೆದ ವರ್ಷ ಡಿಸೆಂಬರ್ 22ರಂದು ಮೈಕೆಲ್ ದುಬೈ ನಿಂದ ಗಡಿಪಾರಾಗಿ ಭಾರತಕ್ಕೆ ಬಂದಿದ್ದು, ಸಿಬಿಐ ಹಾಗೂ ಇಡಿ ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
12 ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್​ಪಿ ತ್ಯಾಗಿ ಹಾಗೂ ಕ್ರಿಶ್ಚಿಯನ್ ಮೈಕೆಲ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್​ ಶೀಟ್ ಸಲ್ಲಿಸಿದ್ದು, ಈ ಒಪ್ಪಂದದಿಂದ ಸರ್ಕಾರದ ಖಜಾನೆಗೆ 2,666 ಕೋಟಿ ರೂ ನಷ್ಟವಾಗಿದೆ ಎಂದು ಆರೋಪಿಸಿದೆ.
ಈ ಒಪ್ಪಂದವು ಸಾಕಾರಗೊಳ್ಳಲು ನೆರವಾಗುವ ಕಾರ್ಯಕ್ಕೆ ಅಗಸ್ಟವೆಸ್ಟ್​ಲ್ಯಾಂಡ್ ಸಂಸ್ಥೆಯಿಂದ ಕ್ರಿಶ್ಚಿಯನ್ ಮೈಕೆಲ್​ ಸುಮಾರು 225 ಕೋಟಿ ರು. ಲಂಚ ಪಡೆದ ಆರೋಪ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT