ಬಿಜೆಪಿ ನಾಯಕರು 
ದೇಶ

2019 ಲೋಕಸಭಾ ಚುನಾವಣೆ 3ನೇ ಪಾಣಿಪತ್ ಕದನದಂತೆ, ಗೆಲ್ಲಲೇಬೇಕು- ಅಮಿತ್ ಶಾ

ಮುಂಬರುವ ಲೋಕಸಭಾ ಚುನಾವಣೆಯನ್ನು 1761ರಲ್ಲಿ ಮರಾಠ ಹಾಗೂ ಅಫ್ಘಾನರ ನಡುವೆ ನಡೆದಿದ್ದ ಮೂರನೇ ಪಾಣಿಪತ್ ಕದನಕ್ಕೆ ಹೋಲಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಈ ಚುನಾವಣೆಯಲ್ಲಿ ಗೆಲ್ಲಲೇಬೇಕಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು 1761ರಲ್ಲಿ ಮರಾಠ ಹಾಗೂ ಅಫ್ಘಾನರ ನಡುವೆ ನಡೆದಿದ್ದ  ಮೂರನೇ ಪಾಣಿಪತ್  ಕದನಕ್ಕೆ ಹೋಲಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಈ ಚುನಾವಣೆಯನ್ನು ಗೆಲ್ಲಲೇಬೇಕಾಗಿದೆ ಎಂದು ಹೇಳಿದ್ದಾರೆ.
ರಾಮಲೀಲಾ ಮೈದಾನದಲ್ಲಿ ಬಿಜೆಪಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಮಹಾಘಟಬಂದನ್ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ರಾಜಕೀಯ ರಾಸಾಯನಶಾಸ್ತ್ರದಂತೆ , ಭೌತಶಾಸ್ತ್ರದಂತೆ ಅಲ್ಲ, ಉತ್ತರ ಪ್ರದೇಶದಲ್ಲಿ 2014ರ ಸಾಧನೆ ಮರುಕಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ
ಮೂರನೇ ಪಾಣಿಪತ್ ಕದನಕ್ಕೂ ಮುನ್ನ ಮರಾಠರು 131 ಯುದ್ದಗಳಲ್ಲಿ ಗೆಲುವು ಸಾಧಿಸಿ ಉತ್ತುಂಗ ಶಿಖರಕ್ಕೇರಿದರು. ನಂತರ. ಭಾರತವನ್ನು 200 ವರ್ಷಗಳವರೆಗೆ ಗುಲಾಮರನ್ನಾಗಿ ಮಾಡಲಾಯಿತು. 2019 ಚುನಾವಣೆ ಸೈದ್ಧಾಂತಿಕ ಯುದ್ಧವಾಗಿದೆ. ಇದು ದಶಕಗಳವರೆಗೆ ಪರಿಣಾಮವನ್ನು ಬೀರುತ್ತದೆ, ಆದ್ದರಿಂದ ಚುನಾವಣೆಯಲ್ಲಿ ಗೆಲ್ಲಲೇಬೇಕಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT