ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳ ವಿವಾಹಕ್ಕೆ ಹೈದರಾಬಾದ್ ಆಸ್ಪತ್ರೆಯೇ ವೇದಿಕೆಯಾಯ್ತು! 
ದೇಶ

ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳ ವಿವಾಹಕ್ಕೆ ಹೈದರಾಬಾದ್ ಆಸ್ಪತ್ರೆಯೇ ವೇದಿಕೆಯಾಯ್ತು!

ಪ್ರೀತಿಗೆ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಜೋಡಿಯನ್ನು ಆಸ್ಪತ್ರೆಯಲ್ಲಿಯೇ ಒಂದಾಗಿಸಿರುವ ಘಟನೆ ತೆಲಂಗಆಣದ ಧರೂರ್ ಎಂಬಲ್ಲಿ ನಡೆದಿದೆ.

ಹೈದರಾಬಾದ್: ಪ್ರೀತಿಗೆ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಜೋಡಿಯನ್ನು ಆಸ್ಪತ್ರೆಯಲ್ಲಿಯೇ ಒಂದಾಗಿಸಿರುವ ಘಟನೆ ತೆಲಂಗಆಣದ ಧರೂರ್ ಎಂಬಲ್ಲಿ ನಡೆದಿದೆ.
ದೀರ್ಘಕಾಲದಿಂಡ ಪ್ರೀತಿಸುತ್ತಿದ್ದ ರೇಶ್ಮಾ  ಹಾಗೂ ನವಾಜ್ ಮನೆಯವರು ವಿರೋಧಿಸಿದ್ದಕ್ಕಾಗಿ ಕೀಟನಾಶಕ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ್ದಾರೆ. ಇಬ್ಬರನ್ನೂ ವಿಕರಾಬಾದ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಇಬ್ಬರೂ ಪ್ರಾಣಾಪಯಾದಿಂಡ ಪಾರಾಗಿದ್ದು ಮಕ್ಕಳ ಈ ದೃಢ ನಿರ್ಧಾರದಿಂದ ಕುಪಿತರಾದ ಪೋಷಕರು ಅವರಿಗೆ ಆಸ್ಪತ್ರೆಯಲ್ಲಿಯೇ ಮದುವೆ ಮಾಡಿಸಿದ್ದಾರೆ.
ಘಟನೆ ವಿವರ
19 ವರ್ಷದ ರೇಷ್ಮಾ ಬೇಗಂ ಹಾಗೂ ವಾಜ್ (21) ಪರಸ್ಪರ ಪ್ರೀತಿಸುತ್ತಿದ್ದು ಈ ವಿಚಾರವನ್ನು ಮನೆಯವರಿಗೆ ಸಹ ತಿಳಿಸಿದ್ದಾರೆ. ಆದರೆ ಇಬ್ಬರ ಮನೆಯಲ್ಲಿಯೂ ವಿರೋಧ ವ್ಯಕ್ತವಾಗಿದೆ. ಆಗ ರೇಷ್ಮಾ ಮನೆಯವರು ಆಕೆಗೆ ಬೇರೆ ಗಂಡು ನೋಡಲು ಪ್ರಾರಂಭಿಸಿದ್ದಾರೆ. ಇದನ್ನು ತಿಳಿದ ರೇಷ್ಮಾ ತಾನು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ತಕ್ಷಣ ಆಕೆಯನ್ನು ವಿಕರಾಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಆದರೆ ಪ್ರಿಯತಮೆಯ ಆತ್ಮಹತ್ಯೆ ಯತ್ನ ನಡೆಸಿರುವುದು ತಿಳಿದ ನವಾಜ್ ತಾನು ಸಹ ಆಸ್ಪತ್ರೆಗೆ ದಾವಿಸಿದ್ದಲ್ಲದೆ ತಾನೂ ಕೀಟನಾಶಕ ಸೇವಿಸಿ ಸಾಯುವುದಕ್ಕೆ ಯತ್ನಿಸಿದ. ಇದಾಗ ಅವನನ್ನು ಸಹ ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. 
ಇಬ್ಬರೂ ಈಗ ಪ್ರಾಣಾಪಾಯದಿಂದ ಪಾರಾಗಿದ್ದು ಸತಿ-ಪತಿಗಳಾಗಿ ಸಂತಸದ ಜೀವನ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT