ಅರವಿಂದ್ ಕೇಜ್ರಿವಾಲ್ 
ದೇಶ

ಹಸುಗಳ ಹೆಸರಿನಲ್ಲಿ ಮತ ಕೇಳುವವರು ಅವುಗಳಿಗೆ ಮೇವನ್ನು ನೀಡಬೇಕು: ಅರವಿಂದ್ ಕೇಜ್ರಿವಾಲ್

ಗೋವುಗಳ ಹೆಸರಿನಲ್ಲಿ ಮತ ಕೇಳುವವರು ಅವುಗಳಿಗೆ ಮೇವನ್ನು ನೀಡಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ನವದೆಹಲಿ: ಗೋವುಗಳ ಹೆಸರಿನಲ್ಲಿ ಮತ ಕೇಳುವವರು ಅವುಗಳಿಗೆ  ಮೇವನ್ನು ನೀಡಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಬವಣಾಗೆ ಭೇಟಿ ನೀಡಿದ್ದ ಅರವಿಂದ್ ಕೇಜ್ರಿವಾಲ್ ಅಲ್ಲಿನ ಗೋಶಾಲೆಗೆ ಭೇಟಿ ನೀಡಿದ್ದರು, ಕಳೆದ 2 ವರ್ಷಗಳಿಂದ ಗೋಶಾಲೆಗೆ ಯಾವುದೇ ಅನುದಾನ ನೀಡಿಲ್ಲ ಎಂದು ಹೇಳಿದ್ದಾರೆ.
ದೆಹಲಿ ಸಚಿವ ಗೋಪಾಲ್ ರೈ ಜೊತೆ ಶ್ರೀ ಕೃಷ್ಣ ಗೋಶಾಲೆ ಗೆ  ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿದ್ದರು,  ದೆಹಲಿ ಸರ್ಕಾರ ಮತ್ತು ಮುನಿಸಿಪಲ್ ಕಾರ್ಪೋರೇಷನ್ ನೀಡುತ್ತಿರುವ ಅನುದಾನದಲ್ಲಿ ಈ ಗೋಶಾಲೆ ನಡೆಸಲಾಗುತ್ತಿದೆ, ಈ ವೇಳೆ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷ ಎಂದಿಗೂ ಹಸುಗಳ ಹೆಸರಿನಲ್ಲಿ ಮತ ಕೇಳುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಆಡಳಿತವಿರುವ ದೆಹಲಿಯ ಮುನಿಸಿಪಲ್ ಕಾರ್ಪೋರೇಷನ್ ನಲ್ಲಿ ಕಳೆದ 2 ವರ್ಷಗಳಿಂದ ಯಾವುದೇ ಹಣ ಬಿಡುಗಡೆಯಾಗುತ್ತಿಲ್ಲ ಹೀಗಾಗಿ ಸಮಸ್ಯೆಗಳು ಎದುರಾಗುತ್ತಿವೆ ಎಂದು ಹೇಳಿದ್ದಾರೆ.
ಮುಂದಿನ ವಾರ ಹರ್ಯಾಣದ ಗೋಶಾಲೆಗಳಿಗೆ ಭೇಟಿ ನೀಡುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ