ಬೆಂಕಿಗಾಹುತಿಯಾದ ಕ್ಯಾಬ್ 
ದೇಶ

ಚಲಿಸುತ್ತಿದ್ದ ಉಬರ್ ಕ್ಯಾಬ್ ನಲ್ಲಿ ಕಾಣಿಸಿಕೊಂಡ ಬೆಂಕಿ, ಮಹಿಳೆಯ ಸಮಯ ಪ್ರಜ್ಞೆಯಿಂದ ಉಳಿದ ಡ್ರೈವರ್ ಜೀವ

ಚಲಿಸುತ್ತಿದ್ದ ಉಬರ್ ಕ್ಯಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೂದಲೆಳೆ ಅಂತರದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಕ್ಯಾಬ್ ಚಾಲಕ ಪಾರಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಚೆನ್ನೈ: ಚಲಿಸುತ್ತಿದ್ದ ಉಬರ್ ಕ್ಯಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೂದಲೆಳೆ ಅಂತರದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಕ್ಯಾಬ್ ಚಾಲಕ ಪಾರಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಚೆನ್ನೈನ ಟಿಟಿಕೆ ರೋಡ್ ಮೇಲ್ಸೇತುವೆ ಮೇಲೆ ಈ ಘಟನೆ ನಡೆದಿದ್ದು, ಉಬರ್ ಕ್ಯಾಬ್ ನೋಡ ನೋಡುತ್ತಿದ್ದಂತೆಯೇ ಸಂಪೂರ್ಣ ಉರಿದು ಭಸ್ಮವಾಗಿದೆ. ಆರಂಭದಲ್ಲಿ ಕಾರಿನಲ್ಲಿ ಸುಟ್ಟ ವಾಸನೆ ಬರುತ್ತಿರುವ ಕುರಿತು ಅರಿತಿದ್ದ ಮಹಿಳಾ ಪ್ರಯಾಣಕಿ ಪಲ್ಲವಿ ಸಿಂಗ್ ಅವರು ವಾಸನೆ ಹೊರಗಡೆ ಬರುತ್ತಿರಬಹುದು ಎಂದು ಸುಮ್ಮನಾಗಿದ್ದರು. ಆದರೆ ಕ್ಯಾಬ್ ಚಲಿಸುತ್ತಿದ್ದಂತೆಯೇ ವಾಸನ ಮತ್ತು ಹೊಗೆ ಹೆಚ್ಚಾಗಿದ್ದು, ಕಾರಿನಿಂದಲೇ ವಾಸನೆ ಬರುತ್ತಿದೆ ಎಂದು ತಿಳಿದು ಕೂಡಲೇ ಚಾಲಕನಿಗೆ ವಿಷಯ ತಿಳಿಸಿದ್ದಾರೆ.

ಕೂಡಲೇ ಚಾಲಕ ಕಾರು ನಿಲ್ಲಿಸಿದ್ದಾನೆಯಾದರೂ ಈ ವೇಳೆಗಾಗಲೇ ಬೆಂಕಿ ವ್ಯಾಪಕವಾಗಿ ಕಾರಿನ ತುಂಬ ಹಬ್ಬಿದೆ. ಈ ದೃಶ್ಯ ನೋಡಿದ ಇತರೆ ಕ್ಯಾಬ್ ಚಾಲಕರು ಕಾರಿನಲ್ಲಿದ್ದ ಮಹಿಳೆ ಮತ್ತು ಚಾಲಕನನ್ನು ಹೊರಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಮಹಿಳೆ ಮತ್ತು ಚಾಲಕ ಯಾವುದೇ ಗಾಯಗಳಿಲ್ಲದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇಲ್ನೋಟಕ್ಕೆ ಕಾರಿನ ಎಸಿ ವ್ಯವಸ್ಥೆಯಲ್ಲಿನ ಒತ್ತಡದಿಂದಾಗಿ ಕಾರಿಗೆ ಬೆಂಕಿ ತಗುಲಿದೆ ಎಂದು ಶಂಕಿಸಲಾಗಿದೆ.

ಇನ್ನು ಘಟನೆಯನ್ನು ಪಲ್ಲವಿ ಸಿಂಗ್ ಅವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ತಮಗಾದ ಭಯಾನಕ ಅನುಭವವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಉಬರ್ ಸಂಸ್ಥೆ ವಿಷಯ ತಿಳಿಸಿದರೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದ ಉಬರ್ ಸಂಸ್ಥೆ ವಿರುದ್ಧವೂ ಕಿಡಿಕಾರಿದ್ದಾರೆ. ಇದೀಗ ಕ್ಯಾಬ್ ಬೆಂಕಿಗಾಹುತಿಯಾದ ವಿಡಿಯೋ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT