ಪ್ರಭಾಸ್, ಶರ್ಮಿಳಾ 
ದೇಶ

ಪ್ರಭಾಸ್ ಜೊತೆಗೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಜಗನ್ ಮೋಹನ್ ರೆಡ್ಡಿ ಸಹೋದರಿ ಪೊಲೀಸರಿಗೆ ದೂರು!

ತೆಲುಗಿನ ಖ್ಯಾತ ನಟ ಪ್ರಭಾಸ್ ಹಾಗೂ ಜಗನ್ ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ ಜೊತೆಗೆ ಅಕ್ರಮ ಸಂಬಂಧ ಇದೆ ಎಂಬಂತಹ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಹೈದ್ರಾಬಾದ್:  ತೆಲುಗಿನ ಖ್ಯಾತ ನಟ ಪ್ರಭಾಸ್ ಹಾಗೂ  ಜಗನ್ ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ ಜೊತೆಗೆ ಅಕ್ರಮ ಸಂಬಂಧ ಇದೆ ಎಂಬಂತಹ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ಸಂಬಂಧ ನಿನ್ನೆ  ಹೈದ್ರಾಬಾದ್ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ಶರ್ಮಿಳಾ, ಈ ರೀತಿ ಸಾಮಾಜಿಕ ಜಾಲತಾಣಗಳ ಮೂಲಕ  ಅಪಪ್ರಚಾರ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಮುಖಂಡೆಯಾಗಿರುವ ಶರ್ಮಿಳಾ, ತಮ್ಮ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ಪೋಸ್ಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ  ಪೊಲೀಸ್ ಆಯುಕ್ತೆ ಅಂಜನಿ ಕುಮಾರ್ ಬಳಿ  ದೂರು ದಾಖಲಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಿಳಾ,  ತೆಲುಗಿನ ಪ್ರಸಿದ್ಧ ನಟರಾಗಿರುವ ಪ್ರಭಾಸ್ ಜೊತೆಗೆ ತಮ್ಮಗೆ ಸಂಬಂಧವಿದೆ ಎಂಬಂತಹ ಸುಳ್ಳು ಪ್ರಚಾರ ಮಾಡಲಾಗುತ್ತಿದೆ.  ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ವ್ಯವಸ್ಥಿತ ಪಿತೂರಿ ನಡೆಸಲಾಗಿದೆ ಎಂದು ಆರೋಪಿಸಿದರು.

ಈ ಪಿತೂರಿ ಹಿಂದೆ  ಟಿಡಿಪಿ  ಕೈವಾಡವಿದೆ ಎಂಬರ್ಥದಲ್ಲಿ   ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಪುತ್ರಿಯಾಗಿರುವ  ಶರ್ಮಿಳಾ  ಹೇಳಿಕೆ ನೀಡಿದ್ದಾರೆ.

2014 ರ ಚುನಾವಣೆ ಸಂದರ್ಭದಲ್ಲಿ ಈ ರೀತಿ ಅಪಪ್ರಚಾರ ನಡೆಸಲಾಗಿತ್ತು. ಮತ್ತೆ 2019ರ ಚುನಾವಣೆ ಸಂದರ್ಭದಲ್ಲೂ ಈ ರೀತಿಯಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇದರ ಹಿಂದೆ  ಟಿಡಿಪಿ ಕೈವಾಡವಿರುವ ಶಂಕೆ ಇದ್ದು, ವೈಯಕ್ತಿಕವಾಗಿ ತೇಜೋವಧೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೊಲೀಸರನ್ನು ಒತ್ತಾಯಿಸಿರುವುದಾಗಿ ತಿಳಿಸಿದರು.

ಪ್ರಭಾಸ್ ಜೊತೆಗೆ ತಮ್ಮಗೆ ಯಾವುದೇ ರೀತಿಯ ಪರಿಚಯವೂ ಇಲ್ಲ, ಅವರೊಂದಿಗೆ ಮಾತುಕತೆ ಕೂಡಾ ನಡೆಸಿಲ್ಲ , ಗೃಹಿಣಿಯಾಗಿ, ತಾಯಿಯಾಗಿ ಇಂತಹ ಅಪ ಪ್ರಚಾರದಿಂದ ತಮ್ಮ ಮನಸ್ಸಿಗೆ ತುಂಬಾ  ನೋವಾಗಿರುವುದರಿಂದ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು  ಶರ್ಮಿಳಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

35 ಎಸೆತಗಳಲ್ಲಿ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿ 24 ಗಂಟೆ ಅಂತಿಮ ಗಡುವು!

SCROLL FOR NEXT