ಸಾಂದರ್ಭಿಕ ಚಿತ್ರ 
ದೇಶ

9 ದಿನಗಳ ನಂತರ ಮುಂಬೈ ಬಸ್ ಮುಷ್ಕರ ಅಂತ್ಯ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಸಾರ್ವಜನಿಕ ಸಾರಿಗೆ ಸಂಸ್ಥೆ (ಬೆಸ್ಟ್‌) ನೌಕರರು ಕಳೆದ 9....

ಮುಂಬೈ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಸಾರ್ವಜನಿಕ ಸಾರಿಗೆ ಸಂಸ್ಥೆ (ಬೆಸ್ಟ್‌)  ನೌಕರರು ಕಳೆದ 9 ದಿನಗಳಿಂದ ನಡೆಸುತ್ತಿದ್ದ  ಮುಷ್ಕರ ಬುಧವಾರ ಅಂತ್ಯವಾಗಿದೆ. 
ಸುಮಾರು 15 ಸಾವಿರ ನೌಕರರಿಗೆ ಮಧ್ಯಂತರ ವೇತನ ಹೆಚ್ಚಳ ಮಾಡುವುದಾಗಿ ಆಡಳಿತ ಮಂಡಳಿ ಭರವಸೆ ನೀಡಿದ ನಂತರ ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಅಂಡರ್ಟೇಕಿಂಗ್ (ಬಿಇಎಸ್‌ಟಿ) ನೌಕರರ ಸಂಘ ಮುಷ್ಕರ ಹಿಂಪಡೆಯಲು ಒಪ್ಪಿಕೊಂಡಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮುಷ್ಕರವನ್ನು ವಾಪಸ್ ಪಡೆದಿರುವುದಾಗಿ ನೌಕರರ ಸಂಘ ಇಂದು ಬಾಂಬೆ ಹೈಕೋರ್ಟ್ ಗೆ ತಿಳಿಸಿದೆ.
ಸಂಸ್ಥೆಯಲ್ಲಿ 32 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಥೆಯ ಮುಂಗಡಪತ್ರವನ್ನು ಬಿಎಂಸಿ (ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್)ನೊಂದಿಗೆ ವಿಲೀನಗೊಳಿಸುವುದು, ವೇತನ ಹೆಚ್ಚಳ ಸೇರಿದಂತೆ ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸುತ್ತಿದ್ದರು. 
ಬಸ್ ಮುಷ್ಕರದಿಂದಾಗಿ ಸತತ 9 ದಿನಗಳಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಸಂಸ್ಥೆಯಲ್ಲಿ 2,610 ಚಾಲಕರು ಮತ್ತು 2,764 ನಿರ್ವಾಹಕರು ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT