ಹೆಣ್ಣುಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ: ಜಾಧವ್ ಪುರ ವಿವಿ ಪ್ರೊಫೆಸರ್ ಕರ್ತವ್ಯ ನಿರ್ವಹಣೆಗೆ ನಿರ್ಬಂಧ 
ದೇಶ

ಹೆಣ್ಣುಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ: ಜಾಧವ್ ಪುರ ವಿವಿ ಪ್ರೊಫೆಸರ್ ಕರ್ತವ್ಯ ನಿರ್ವಹಣೆಗೆ ನಿರ್ಬಂಧ

ಯುವತಿಯರ ಕನ್ಯತ್ವದ ಬಗ್ಗೆ ಫೇಸ್‍ಬುಕ್‍ನಲ್ಲಿ ಅಶ್ಲೀಲವಾಗಿ ಪೋಸ್ಟ್ ಮಾಡುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಜಾಧವ್ ಪುರ ವಿವಿಯ ಪ್ರೊಫೆಸರ್ ನ್ನು ಕರ್ತವ್ಯ ನಿರ್ವಹಣೆಯಿಂದ ತೆಗೆದುಹಾಕಲಾಗಿದೆ.

ಕೋಲ್ಕತ್ತಾ: ಯುವತಿಯರ ಕನ್ಯತ್ವದ ಬಗ್ಗೆ ಫೇಸ್‍ಬುಕ್‍ನಲ್ಲಿ ಅಶ್ಲೀಲವಾಗಿ ಪೋಸ್ಟ್ ಮಾಡುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಜಾಧವ್ ಪುರ ವಿವಿಯ ಪ್ರೊಫೆಸರ್ ನ್ನು ಕರ್ತವ್ಯ ನಿರ್ವಹಣೆಯಿಂದ ತೆಗೆದುಹಾಕಲಾಗಿದೆ. 
ವಿವಿಯ ಸ್ಟೂಡೆಂಟ್-ಟೀಚರ್ ಸಮಿತಿಯಿಂದ ತಕ್ಷಣವೇ ಜಾರಿಗೆ ಬರುವಂತೆ ಪ್ರೊಫೆಸರ್ ಕರ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ವಿವಿಯ ಹೇಳಿಕೆ ತಿಳಿಸಿದ್ದು ಕ್ಯಾಂಪಸ್ ಒಳಗೆ ಪ್ರವೇಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. 
ಯುವತಿಯರ ಕನ್ಯತ್ವವನ್ನು ತಂಪು ಪಾನೀಯಕ್ಕೆ ಹೋಲಿಸಿದ್ದ ಪ್ರೊಫೆಸರ್, ನೀವು ಸೀಲ್ ಒಡೆದಿರುವ ತಂಪು ಪಾನೀಯ ಖರೀದಿ ಮಾಡುತ್ತೀರಾ ಎಂದು ಪ್ರಶ್ನಿಸಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿದ್ದರು. ತಕ್ಷಣವೇ ಅದನ್ನು ಡಿಲೀಟ್ ಮಾಡಿದ್ದರಾದರೂ ಅದರ ಸ್ಕ್ರೀನ್ ಶಾಟ್ ವೈರಲ್ ಆಗಿತ್ತು. 
ಪ್ರೊಫೆಸರ್ ಫೇಸ್ ಬುಕ್ ಪೋಸ್ಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಜಾಧವ್ ಪುರ ವಿವಿ ಉಪಕುಲಪತಿ ಸುರಂಜನ್ ದಾಸ್, "ಅವರೊಬ್ಬ ಪ್ರೊಫೆಸರ್, ಅವರ ಫೇಸ್ ಬುಕ್ ಪೋಸ್ಟ್ ವಿವಿಯ ಘನತೆಯನ್ನು ಕುಗ್ಗಿಸಿದೆ. ನಿಯಮಗಳ ಪ್ರಕರ  ಪ್ರೊಫೆಸರ್ ಕನಕ್ ಸರ್ಕಾರ್ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT