ಕೇರಳದ ಕೊಲ್ಲಮ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಪಾಸ್ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿಯವರನ್ನು ಸನ್ಮಾನಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

ಪ್ರಧಾನಿ ಮೋದಿಯವರು ಮನುಸ್ಮೃತಿ ಬದಲಿಗೆ ಸಂವಿಧಾನ ಓದಿ ಅರ್ಥಮಾಡಿಕೊಳ್ಳಲಿ; ಸಿಪಿಎಂ ವಾಗ್ದಾಳಿ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಟೀಕಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೇಲೆ...

ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಟೀಕಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೇಲೆ ಸಿಪಿಎಂ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಮನುಸ್ಮೃತಿ ಅಥವಾ ಆರ್ ಎಸ್ಎಸ್ ಭಾಷೆ ತೆಗೆದುಕೊಳ್ಳುವುದರ ಬದಲಿಗೆ ದೇಶದ ಸಂವಿಧಾನವನ್ನು ಪ್ರಧಾನಿ ಮೋದಿಯವರು ಓದಿ ಅರ್ಥಮಾಡಿಕೊಂಡು ಎತ್ತಿಹಿಡಿಯುವ ಕೆಲಸ ಮಾಡಲಿ ಎಂದು ಹೇಳಿದರೆ, ಶಬರಿಮಲೆ ವಿವಾದವನ್ನು ಬಿಜೆಪಿಯು ರಾಜಕೀಯ ಅವಕಾಶವಾದಿತನವಾಗಿ ಬಳಸಿಕೊಳ್ಳಲು ಬಿಜೆಪಿ ನೋಡುತ್ತಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಳ್ಳಪಳ್ಳಿ ರಾಮಚಂದ್ರನ್ ಟೀಕಿಸಿದ್ದಾರೆ.

ಕೊಲ್ಲಮ್ ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶಬರಿಮಲೆ ವಿಚಾರದಲ್ಲಿ ಎಲ್ ಡಿಎಫ್ ಸರ್ಕಾರ ನಡೆದುಕೊಳ್ಳುವ ರೀತಿ ನಾಚಿಕೆಗೇಡಿನ ನಡವಳಿಕೆಯಾಗಿದ್ದು ಇದು ಇತಿಹಾಸದಲ್ಲಿ ಉಳಿಯಲಿದೆ ಎಂದು ಟೀಕಿಸಿದ್ದರು.

ಇನ್ನೊಂದೆಡೆ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ದ್ವಂದ್ವ ನಿಲುವು ತಳೆದಿದೆ ಎಂದಿದ್ದರು. ಕಾಂಗ್ರೆಸ್ ಸಂಸತ್ತಿನಲ್ಲಿ ಒಂದು ಮಾತು ಹೇಳಿದರೆ ಶಬರಿಮಲೆಯಲ್ಲಿ ಮತ್ತೊಂದು ರೀತಿಯಲ್ಲಿ ನಡೆದುಕೊಳ್ಳುತ್ತದೆ. ಶಬರಿಮಲೆ ವಿಚಾರದಲ್ಲಿ ಯುಡಿಎಫ್ ಸ್ಪಷ್ಟ ನಿಲುವು ಏನೆಂಬುದನ್ನು ಹೇಳಲಿ ಎಂದಿದ್ದರು.

ಇದಕ್ಕೆ ಪ್ರಧಾನಿ ಮೋದಿ ವಿರುದ್ಧ ಟ್ವಿಟ್ಟರ್ ನಲ್ಲಿ ಹರಿಹಾಯ್ದಿರುವ ಸಿಪಿಎಂ, ಹಿಂಜರಿಕೆಯ ಮನಸ್ಥಿತಿಯವರಿಂದ ಕೇರಳಕ್ಕೆ ಸಾಂಸ್ಕೃತಿಕ ಪಾಠ ಕಲಿಯಬೇಕಾದ ಅಗತ್ಯವಿಲ್ಲ.ಕೊಲ್ಲಮ್ ನಲ್ಲಿ ಲೋಕೋಪಯೋಗಿ ಯೋಜನೆಯನ್ನು ಉದ್ಘಾಟಿಸಲು ಬಂದವರು ಶಬರಿಮಲೆ ಬಗ್ಗೆ ಸುಪ್ರೀಂ ಕೋರ್ಟ್ ನೀಡಿದ ಆದೇಶದ ಬಗ್ಗೆ ಮಾತನಾಡಿ ಎಲ್ ಡಿಎಫ್ ಸರ್ಕಾರ ಆದೇಶ ಜಾರಿಗೆ ತರುತ್ತಿಲ್ಲ ಎಂದು ಮಾತನಾಡುವ ಅಗತ್ಯವೇನಿದೆ, ನಿಜಕ್ಕೂ ಮೋದಿಯವರಿಗೆ ನಾಚಿಕೆಯಾಗಬೇಕು ಎಂದಿದ್ದರು.

ಮೋದಿಯವರು ಮೊದಲು ಭಾರತ ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳಬೇಕು ಎಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT