ಸಿಬಿಐ ಹಂಗಾಮಿ ನಿರ್ದೇಶಕರ ನೇಮಕ ಪ್ರಶ್ನಿಸಿ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಮುಂದಿನ ವಾರ ವಿಚಾರಣೆ 
ದೇಶ

ಸಿಬಿಐ ಹಂಗಾಮಿ ನಿರ್ದೇಶಕರ ನೇಮಕ ಪ್ರಶ್ನಿಸಿ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಮುಂದಿನ ವಾರ ವಿಚಾರಣೆ

ಸಿಬಿಐಗೆ ನಾಗೇಶ್ವರ್ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ಸಿಬಿಐಗೆ ನಾಗೇಶ್ವರ್ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. 
ಕಾಮನ್ ಕಾಸ್ ಎಂಬ ಎನ್ ಜಿಒ ಹಾಗೂ ಆರ್ ಟಿಐ ಕಾರ್ಯಕರ್ತರಾದ ಅಂಜಲಿ ಭಾರದ್ವಾಜ್, ಸಿಬಿಐಗೆ ನಾಗೇಶ್ವರ್ ರಾವ ವರನ್ನು ಹಂಗಾಮಿ ನಿರ್ದೆಶಕರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿದ್ದು, ಶುಕ್ರವಾರದಂದು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದರು. ಆದರೆ ಶುಕ್ರವಾರದಂದು ವಿಚಾರಣೆ ನಡೆಸಲು ಸಾಧ್ಯವೇ ಇಲ್ಲ ಎಂದು  ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಪ್ರಶಾಂತ್ ಭೂಷಣ್ ಗೆ ಹೇಳಿದ್ದು ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. 
ಅಲೋಕ್ ಕುಮಾರ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿದ ಬಳಿಕ, ಪ್ರಧಾನಿ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಹೊಸ ನಿರ್ದೇಶಕರ ನೇಮಕ ಮಾಡುವವರೆಗೂ ಹೆಚ್ಚುವರಿ ನಿರ್ದೇಶಕ ನಾಗೇಶ್ವರ್ ರಾವ್ ಅವರಿಗೆ ಹಂಗಾಮಿ ನಿರ್ದೇಶಕ ಸ್ಥಾನವನ್ನು ನೀಡಲಾಗಿತ್ತು. 
ಕಳೆದ ವರ್ಷ ಅಕ್ಟೋಬರ್ 23 ರಂದು ನಾಗೇಶ್ವರ್ ರಾವ್ ಅವರನ್ನು ಸಿಬಿಐ ನ ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದನ್ನು ಸುಪ್ರೀಂ ಕೋರ್ಟ್ ಅನೂರ್ಜಿತಗೊಳಿಸಿತ್ತು. ಇದನ್ನೇ ಉಲ್ಲೇಖಿಸಿರುವ ಅರ್ಜಿದಾರರು, ಸರ್ಕಾರ ಅಕ್ರಮವಾಗಿ ಈಗ ನಾಗೇಶ್ವರ್ ರಾವ್ ಅವರನ್ನು ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಿಸಿದೆ ಎಂದು ಕೋರ್ಟ್ ನಲ್ಲಿ ವಾದಿಸಿದ್ದು ನೇಮಕವನ್ನು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT