ಸಂಗ್ರಹ ಚಿತ್ರ 
ದೇಶ

ಪ್ರತಿಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ: ಪ್ರಶಾಂತ್ ಭೂಷಣ್ ಗೆ 'ಸುಪ್ರೀಂ' ಸಲಹೆ

ಸಕಾರಾತ್ಮಕ ದೃಷ್ಟಿಕೋನ ಇಡೀ ವಿಶ್ವವನ್ನೇ ಉತ್ತಮವಾಗಿಸುತ್ತದೆ, ಪ್ರತಿಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ ಎಂದು ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ತಿಳಿ ಹೇಳಿದೆ.

ನವದೆಹಲಿ: ಸಕಾರಾತ್ಮಕ ದೃಷ್ಟಿಕೋನ ಇಡೀ ವಿಶ್ವವನ್ನೇ ಉತ್ತಮವಾಗಿಸುತ್ತದೆ, ಪ್ರತಿಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ ಎಂದು ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ತಿಳಿ ಹೇಳಿದೆ.
ಲೋಕಪಾಲ್ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆದ ವಿಚಾರಣೆ ಹಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಯಿತು. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಜೆಐ ರಂಜನ್ ಗಗೋಯ್, ನ್ಯಾ,ಎಲ್ ಎನ್ ರಾವ್ ಮತ್ತು ಎಸ್ ಕೆಕೌಲ್ ಅವರಿದ್ದ ತ್ರಿಸದಸ್ಯ ಪೀಠ ಹಿರಿಯ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ತಿಳಿ ಹೇಳಿದ ಘಟನೆ ನಡೆಯಿತು. 
ಪ್ರಮುಖವಾಗಿ ಲೋಕಪಾಲ್ ನೇಮಕ ಸಂಬಂಧ ಕೇಂದ್ರ ಸರ್ಕಾರ ಸಲ್ಲಿಕೆ ಮಾಡಿದ್ದ ವರದಿಗೆ ಆಕ್ಷೇಪ ಸಲ್ಲಿಸಿದ ಪ್ರಶಾಂತ್ ಭೂಷಣ್ ಅವರು ಲೋಕಪಾಲ್ ನೇಮಕಾತಿ ವಿಚಾರ ಸಂಪೂರ್ಣ ಪಾರದರ್ಶಕವಾಗಿರಬೇಕು. ದೇಶದ ಪ್ರಜೆಗಳು ಈ ಸಂಬಂಧ ಸಂಪೂರ್ಣ ಮಾಹಿತಿ ತಿಳಿದಿರಬೇಕು ಎಂದು ಹೇಳಿದರು. ಈ ವಾದಕ್ಕೆ ಅಡ್ಡಿ ಪಡಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ಅವರು, ಪ್ರಶಾಂತ್ ಭೂಷಣ್ ಅವರನ್ನು ಉದ್ದೇಶಿಸಿ ಲೋಕಪಾಲ್ ನೇಮಕಾತಿ ಸಂಬಂಧ ಸರ್ಕಾರದ ಮೇಲೆ ಅನುಮಾನ ಪಡಲು ನಿಮ್ಮ ಬಳಿ ಏನಾದರೂ ಪ್ರಬಲ ಅಂಶಗಳಿವೆಯೇ..? ಲೋಕಪಾಲ್ ನೇಮಕಾತಿ ಸಂಬಂಧ ನೇಮಕವಾಗಿರುವ ಸಮಿತಿ ಕುರಿತಂತೆ ನಿಮಗೆ ಶಂಕೆಗಳೇನಾದರೂ ಇವೆಯೇ..? ಎಂದು ಪ್ರಶ್ನಿಸಿದರು. 
ಅಂತೆಯೇ ಪ್ರಶಾಂತ್ ಭೂಷಣ್ ಅವರನ್ನು ಉದ್ದೇಶಿಸಿ, ಭೂಷಣ್ ಅವರೇ, ಪ್ರತೀಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ.. ಸಕಾರಾತ್ಮಕ ದೃಷ್ಟಿಕೋನದಿಂದ ನೋಡಲು ಪ್ರಯತ್ನ ಪಡಿ.. ಸಕಾರಾತ್ಮಕ ದೃಷ್ಟಿಕೊನ ಇಡೀ ವಿಶ್ವವನ್ನೇ ಉತ್ತಮವಾಗಿಸುತ್ತದೆ. ನಾಳೆಯಿಂದಲೇ ಈ ಬಗ್ಗೆ ಯೋಚನೆ ಮಾಡಿ ಎಂದು ಸಿಜೆಐ ರಂಜನ್ ಗಗೋಯ್ ಹಾಸ್ಯಾತ್ಮಕವಾಗಿ ಹೇಳಿದರು.
ಅಂತೆಯೇ ಲೋಕಪಾಲ್ ಶೋಧನಾ ಸಮಿತಿ ಮಾರ್ಚ್ 7ರಂದು ಸಮಿತಿಯ ಹಸೆರನ್ನು ಶಿಫಾರಸ್ಸು ಮಾಡುವ ವಿಶ್ವಾಸವಿದೆ. ಅವಶ್ಯಕತೆ ಇಲ್ಲದ ನಿರ್ದೇಶನ ನೀಡುವಂತೆ ನಮ್ಮ ಮೇಲೆ ಒತ್ತಡ ಹೇರಬೇಡಿ. ಈಗೇನಿದ್ದರೂ ಲೋಕಪಾಲ್ ಶೋಧನಾ ಸಮಿತಿ ತಮಗೆ ನೀಡಿರುವ ಕಾಲಾವಧಿಯೊಳಗೆ ಲೋಕಾಪಲ್ ಗೆ ಹೆಸರುಗಳನ್ನು ಶಿಫಾರಸ್ಸು ಮಾಡಬೇಕು ಎಂದು ರಂಜನ್ ಗಗೋಯ್ ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT