ಸಂಗ್ರಹ ಚಿತ್ರ 
ದೇಶ

ಪ್ರತಿಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ: ಪ್ರಶಾಂತ್ ಭೂಷಣ್ ಗೆ 'ಸುಪ್ರೀಂ' ಸಲಹೆ

ಸಕಾರಾತ್ಮಕ ದೃಷ್ಟಿಕೋನ ಇಡೀ ವಿಶ್ವವನ್ನೇ ಉತ್ತಮವಾಗಿಸುತ್ತದೆ, ಪ್ರತಿಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ ಎಂದು ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ತಿಳಿ ಹೇಳಿದೆ.

ನವದೆಹಲಿ: ಸಕಾರಾತ್ಮಕ ದೃಷ್ಟಿಕೋನ ಇಡೀ ವಿಶ್ವವನ್ನೇ ಉತ್ತಮವಾಗಿಸುತ್ತದೆ, ಪ್ರತಿಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ ಎಂದು ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ತಿಳಿ ಹೇಳಿದೆ.
ಲೋಕಪಾಲ್ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆದ ವಿಚಾರಣೆ ಹಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಯಿತು. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಜೆಐ ರಂಜನ್ ಗಗೋಯ್, ನ್ಯಾ,ಎಲ್ ಎನ್ ರಾವ್ ಮತ್ತು ಎಸ್ ಕೆಕೌಲ್ ಅವರಿದ್ದ ತ್ರಿಸದಸ್ಯ ಪೀಠ ಹಿರಿಯ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ತಿಳಿ ಹೇಳಿದ ಘಟನೆ ನಡೆಯಿತು. 
ಪ್ರಮುಖವಾಗಿ ಲೋಕಪಾಲ್ ನೇಮಕ ಸಂಬಂಧ ಕೇಂದ್ರ ಸರ್ಕಾರ ಸಲ್ಲಿಕೆ ಮಾಡಿದ್ದ ವರದಿಗೆ ಆಕ್ಷೇಪ ಸಲ್ಲಿಸಿದ ಪ್ರಶಾಂತ್ ಭೂಷಣ್ ಅವರು ಲೋಕಪಾಲ್ ನೇಮಕಾತಿ ವಿಚಾರ ಸಂಪೂರ್ಣ ಪಾರದರ್ಶಕವಾಗಿರಬೇಕು. ದೇಶದ ಪ್ರಜೆಗಳು ಈ ಸಂಬಂಧ ಸಂಪೂರ್ಣ ಮಾಹಿತಿ ತಿಳಿದಿರಬೇಕು ಎಂದು ಹೇಳಿದರು. ಈ ವಾದಕ್ಕೆ ಅಡ್ಡಿ ಪಡಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ಅವರು, ಪ್ರಶಾಂತ್ ಭೂಷಣ್ ಅವರನ್ನು ಉದ್ದೇಶಿಸಿ ಲೋಕಪಾಲ್ ನೇಮಕಾತಿ ಸಂಬಂಧ ಸರ್ಕಾರದ ಮೇಲೆ ಅನುಮಾನ ಪಡಲು ನಿಮ್ಮ ಬಳಿ ಏನಾದರೂ ಪ್ರಬಲ ಅಂಶಗಳಿವೆಯೇ..? ಲೋಕಪಾಲ್ ನೇಮಕಾತಿ ಸಂಬಂಧ ನೇಮಕವಾಗಿರುವ ಸಮಿತಿ ಕುರಿತಂತೆ ನಿಮಗೆ ಶಂಕೆಗಳೇನಾದರೂ ಇವೆಯೇ..? ಎಂದು ಪ್ರಶ್ನಿಸಿದರು. 
ಅಂತೆಯೇ ಪ್ರಶಾಂತ್ ಭೂಷಣ್ ಅವರನ್ನು ಉದ್ದೇಶಿಸಿ, ಭೂಷಣ್ ಅವರೇ, ಪ್ರತೀಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ.. ಸಕಾರಾತ್ಮಕ ದೃಷ್ಟಿಕೋನದಿಂದ ನೋಡಲು ಪ್ರಯತ್ನ ಪಡಿ.. ಸಕಾರಾತ್ಮಕ ದೃಷ್ಟಿಕೊನ ಇಡೀ ವಿಶ್ವವನ್ನೇ ಉತ್ತಮವಾಗಿಸುತ್ತದೆ. ನಾಳೆಯಿಂದಲೇ ಈ ಬಗ್ಗೆ ಯೋಚನೆ ಮಾಡಿ ಎಂದು ಸಿಜೆಐ ರಂಜನ್ ಗಗೋಯ್ ಹಾಸ್ಯಾತ್ಮಕವಾಗಿ ಹೇಳಿದರು.
ಅಂತೆಯೇ ಲೋಕಪಾಲ್ ಶೋಧನಾ ಸಮಿತಿ ಮಾರ್ಚ್ 7ರಂದು ಸಮಿತಿಯ ಹಸೆರನ್ನು ಶಿಫಾರಸ್ಸು ಮಾಡುವ ವಿಶ್ವಾಸವಿದೆ. ಅವಶ್ಯಕತೆ ಇಲ್ಲದ ನಿರ್ದೇಶನ ನೀಡುವಂತೆ ನಮ್ಮ ಮೇಲೆ ಒತ್ತಡ ಹೇರಬೇಡಿ. ಈಗೇನಿದ್ದರೂ ಲೋಕಪಾಲ್ ಶೋಧನಾ ಸಮಿತಿ ತಮಗೆ ನೀಡಿರುವ ಕಾಲಾವಧಿಯೊಳಗೆ ಲೋಕಾಪಲ್ ಗೆ ಹೆಸರುಗಳನ್ನು ಶಿಫಾರಸ್ಸು ಮಾಡಬೇಕು ಎಂದು ರಂಜನ್ ಗಗೋಯ್ ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT