ಶಬರಿಮಲೆ 
ದೇಶ

50 ವರ್ಷದೊಳಗಿನ 51 ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಿದ್ದಾರೆ: ಸುಪ್ರೀಂಗೆ ಕೇರಳ ಸರ್ಕಾರ

ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಬೇಕು...

ನವದೆಹಲಿ: ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ ಇದುವರೆಗೆ 10 ರಿಂದ 50 ವರ್ಷದೊಳಗಿನ 51 ಮಹಿಳೆಯರು ದೇಗುಲ ಪ್ರವೇಶಿಸಿದ್ದಾರೆ ಎಂದು ಕೇರಳ ಸರ್ಕಾರ ಶುಕ್ರವಾರ ಸರ್ವೋಚ್ಛ ನ್ಯಾಯಾಲಯಕ್ಕೆ ತಿಳಿಸಿದೆ.
ಶಬರಿಮಲೆ ದೇವಸ್ಥಾನ ಪ್ರವೇಶಿಸಿದ ನಂತರ ಭದ್ರತೆ ಕೋರಿ ಬಿಂದು ಹಾಗೂ ಕನಕಾ ದುರ್ಗ ಎಂಬ ಮಹಿಳೆಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕೇರಳ ಸರ್ಕಾರ, ಕೋರ್ಟ್ ಗೆ ಈ ಮಾಹಿತಿ ನೀಡಿದೆ.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್  ಮತ್ತು ನ್ಯಾಯಾಧೀಶರಾದ ಎಲ್.ಎನ್. ರಾವ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ  ತ್ರಿಸದಸ್ಯ ಪೀಠ, ಬಿಂದು ಹಾಗೂ ಕನಕಾ ದುರ್ಗ ಅವರಿಗೆ 24x7 ಭದ್ರತೆ ಕೊಡುವಂತೆ ಕೇರಳ ಪೊಲೀಸರಿಗೆ ತಾಕೀತು ಮಾಡಿದೆ.
ಇದೇ ವೇಳೆ ಶಬರಿಮಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳೊಂದಿಗೆ ಈ ವಿಚಾರ ತಳಕು ಹಾಕುವುದಕ್ಕೆ ನ್ಯಾಯಪೀಠ ನಿರಾಕರಿಸಿದೆ.
10 ರಿಂದ 50 ವರ್ಷದೊಳಗಿನ ಮಹಿಳೆಯರು ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ  ಸುಪ್ರೀಂಕೋರ್ಟ್ ಅವಕಾಶ ಕಲ್ಪಿಸಿದ ಮೂರು ತಿಂಗಳ ಬಳಿಕ ಪೊಲೀಸರ ಭದ್ರತೆಯೊಂದಿಗೆ ಬಿಂದು ಹಾಗೂ ಕನಕಾ ದುರ್ಗ ದೇಗುಲ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!