ಸಾಂದರ್ಭಿಕ ಚಿತ್ರ 
ದೇಶ

ಲಡಾಖ್ ನಲ್ಲಿ ಹಿಮಪಾತ: ಐವರು ಸಾವು, ಏಳು ಮಂದಿಗಾಗಿ ಹುಡುಕಾಟ

ಜಮ್ಮು ಮತ್ತು ಕಾಶ್ಮೀರದ ಲಡಾಖ್ ನ ಖರ್ದುಂಗ್ ಲಾದಲ್ಲಿ ಭಾರೀ ಹಿಮಪಾತವಾಗಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ....

ಲಡಾಖ್: ಜಮ್ಮು ಮತ್ತು ಕಾಶ್ಮೀರದ ಲಡಾಖ್ ನ ಖರ್ದುಂಗ್ ಲಾದಲ್ಲಿ ಭಾರೀ ಹಿಮಪಾತವಾಗಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ ಮತ್ತು ಇನ್ನು ಏಳು ಮಂದಿಗಾಗಿ ಶೋಧ ಕಾರ್ಯಚರಣೆ ಮುಂದುವರೆದಿದೆ.
ಇಂದು ಬೆಳಗ್ಗೆ ಹಿಮ ತುಂಬಿಕೊಳ್ಳಲು 12 ಜನರಿದ್ದ ಒಂದು ಸ್ಕಾರ್ಪಿಯೋ ಮತ್ತು ಎರಡು ಟಿಪ್ಪರ್ ಗಳು ಖರ್ದುಂಗ್‌ ಲಾ ಕಡೆಗೆ ಹೋಗಿದ್ದವು. ಒಂದು ಟಿಪ್ಪರ್‌ ನಲ್ಲಿ ಹಿಮ ತುಂಬಲ್ಪಟ್ಟು ಇನ್ನೊಂದರಲ್ಲಿ ತುಂಬುವ ವೇಳೆ ಹಿಮಪಾತವಾಗಿದೆ. ಪರಿಣಾಮವಾಗಿ ಮೂರೂ ವಾಹನಗಳು ಮತ್ತು ಅದರೊಳಗಿದ್ದ 12 ಮಂದಿ ಹಿಮದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ ಮತ್ತು ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು, ಹಿಮಪಾತದಲ್ಲಿ ಸಿಲುಕಿದ್ದ ಐವರ ಮೃತ ದೇಹವನ್ನು ಹೊರತೆಗೆಯಲಾಗಿದ್ದು, ಇನ್ನು ಏಳು ಮಂದಿಗಾಗಿ ಕಾರ್ಯಾಚರಣೆ ಮುಂದುವರೆದಿದೆ. 
ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ಬಗ್ಗೆ ಗುರುವಾರವೇ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT