ಸೇನಾ ಆಹಾರದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಪುತ್ರ ನಿಧನ 
ದೇಶ

ಸೇನಾ ಆಹಾರದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಪುತ್ರ ನಿಧನ

2017 ರಲ್ಲಿ ಸೇನಾ ಆಹಾರದ ಗುಣಮಟ್ಟದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಅವರ ಪುತ್ರ ರೋಹಿತ್ ನಿಧನರಾಗಿದ್ದಾರೆ.

ರೆವಾರಿ: 2017 ರಲ್ಲಿ ಸೇನಾ ಆಹಾರದ ಗುಣಮಟ್ಟದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಅವರ ಪುತ್ರ ರೋಹಿತ್ ನಿಧನರಾಗಿದ್ದಾರೆ. 
ಹರ್ಯಾಣದ ರೆವಾರಿಯಲ್ಲಿ ರೋಹಿತ್ ಶವ ಪತ್ತೆಯಾಗಿದೆ. ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನಮಗೆ ಕರೆ ಬಂದಿತ್ತು. ತಕ್ಷಣವೇ ಸ್ಥಳಕ್ಕೆ ಹೋದ ನಮಗೆ ರೂಮ್ ಗೆ ಬೀಗ ಹಾಕಿರುವುದು ಕಂಡಿಬಂದಿತು. ಪಿಸ್ತೂಲ್ ಮೂಲಕ ಗುಂಡು ಹಾರಿಸಿಕೊಂಡು ಯೋಧನ ಪುತ್ರ ಮೃತಪಟ್ಟಿದ್ದಾನೆ.
ರೋಹಿತ್ ತಂದೆ ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್ ರಾಜ್ ಗೆ ತೆರಳಿದ್ದರು. ಅವರ ತಂದೆಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 2017 ರಲ್ಲಿ ಸೇನಾ ಆಹಾರದ ಗುಣಮಟ್ಟದ ಬಗ್ಗೆ ಯೋಧ ತೇಜ್ ಬಹದ್ದೂರ್ ವಿಡಿಯೋ ಮೂಲಕ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT