ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ಮದುವೆಯಾಗಲು ನಿರಾಕರಿಸಿದ ವಿಧವೆ ಮೇಲೆ ಆಸಿಡ್ ಎರಚಿ ಯುವಕ ಆತ್ಮಹತ್ಯೆ!

ಮದುವೆಯಾಗಲು ನಿರಾಕರಿಸಿದ 35 ವರ್ಷದ ವಿಧವೆ ಮೇಲೆ ಆಸಿಡ್ ಎರಚಿ 28 ವರ್ಷದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ನಾಗೆರ್ ಕೊಯಲ್:  ಮದುವೆಯಾಗಲು ನಿರಾಕರಿಸಿದ 35 ವರ್ಷದ  ವಿಧವೆ ಮೇಲೆ  ಆಸಿಡ್ ಎರಚಿ 28 ವರ್ಷದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ದಕ್ಷಿಣ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಶೇ, 40 ರಷ್ಟು ಸುಟ್ಟ ಗಾಯಗಳಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಜಾನ್ ಎಂದು ಗುರುತಿಸಲಾಗಿದೆ. ಆದರೆ, ತದನಂತರ ಆತನು ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಮಕ್ಕಳೊಂದಿಗೆ ತಿರುವತ್ತರ್ ಬಳಿ ವಾಸಿಸುತ್ತಿದ್ದ ಗಿರಿಜಾ (35)  ಪತಿ ಒಂಬತ್ತು ವರ್ಷಗಳ ಹಿಂದೆಯೇ ತೀರಿಕೊಂಡಿದ್ದಾರೆ. ಟೈಲರ್ ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದ ಗಿರಿಜಾಳನ್ನು ಮದುವೆಯಾಗುವಂತೆ ನೆರೆಮನೆಯಲ್ಲಿ ವಾಸಿಸುತ್ತಿದ್ದ ಜಾನ್ ಪದೇ ಪದೇ  ಪೀಡಿಸುತ್ತಿದ್ದನಂತೆ. ಇದರಿಂದ ಬೇಸತ್ತ ಗಿರಿಜಾ ಆತನ ವಿರುದ್ಧ ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಗಿರಿಜಾ ಹಾಗೂ ಜಾನ್ ನಡುವೆ ಜಗಳ ನಡೆದಿದ್ದು,  ಆಕ್ರೋಶಗೊಂಡ ಜಾನ್, ಗಿರಿಜಾಳ ಮುಖದ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಇದನ್ನು ನೋಡಿದ ನೆರೆಹೊರೆಯವರು ಆಕೆಯನ್ನು ಕನ್ಯಾಕುಮಾರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸೇರಿಸಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ಈ ಮಧ್ಯೆ ವಿಷ ಸೇವಿಸಿದ ಜಾನ್ ನನ್ನು  ಖಾಸಗಿ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ತಿರುವತ್ತರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT