ಪ್ರಧಾನಿ ನರೇಂದ್ರ ಮೋದಿ 
ದೇಶ

ಉದ್ಯಮಕ್ಕೆ ಭಾರತ ದೇಶ ಹಿಂದೆಂದಿಗಿಂತಲೂ ಇಂದು ಪ್ರಶಸ್ತವಾಗಿದೆ; ಪ್ರಧಾನಿ ಮೋದಿ

ಹಿಂದೆಂದಿಗಿಂತಲೂ ಉತ್ತಮ ರೀತಿಯಲ್ಲಿ ಭಾರತ ಉದ್ಯಮ ಮತ್ತು ವಹಿವಾಟುಗಳಿಗೆ ಪ್ರಶಸ್ತವಾಗಿದೆ ...

ಗಾಂಧಿನಗರ(ಗುಜರಾತ್): ಹಿಂದೆಂದಿಗಿಂತಲೂ ಉತ್ತಮ ರೀತಿಯಲ್ಲಿ ಭಾರತ ಉದ್ಯಮ ಮತ್ತು ವಹಿವಾಟುಗಳಿಗೆ ಪ್ರಶಸ್ತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುಜರಾತ್ ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಕಾರ್ಯಕ್ರಮದ 9ನೇ ಆವೃತ್ತಿಯಲ್ಲಿ ಮಾತನಾಡಿ, ತಮ್ಮ ಸರ್ಕಾರ ಹೂಡಿಕೆಯ ಆಕರ್ಷಣೆಗೆ ತೆಗೆದುಕೊಂಡಿರುವ ಕೆಲವು ಕ್ರಮಗಳು ಮತ್ತು ಉದ್ಯಮ ಸುಗಮವಾಗಿ ನಡೆಸುವಂತಹ ವಾತಾವರಣ ಸೃಷ್ಟಿ ಮಾಡಿದೆ ಎಂದರು.

ವಿಶ್ವ ಬ್ಯಾಂಕಿನ ಉದ್ಯಮ ಸುಗಮ ವರದಿಯಲ್ಲಿ ಭಾರತ ರ್ಯಾಂಕಿಂಗ್ ಪಟ್ಟಿಯಲ್ಲಿ 65ನೇ ಸ್ಥಾನಕ್ಕೆ ಏರಿಕೆಯಾಗಿದ್ದು ಉದ್ಯಮ ವಲಯದಲ್ಲಿ ಹೂಡಿಕೆಗೆ ಪ್ರಶಸ್ತ ದೇಶ ಎನಿಸಿಕೊಂಡಿದೆ. ಶ್ರಮಪಟ್ಟು ಕೆಲಸ ಮಾಡಿದರೆ ಮುಂದಿನ 50 ವರ್ಷಗಳಲ್ಲಿ ಭಾರತ ರ್ಯಾಂಕಿಂಗ್ ಪಟ್ಟಿಯಲ್ಲಿ ಇನ್ನಷ್ಟು ಮುಂದೆ ಸಾಗಬಹುದು ಎಂದು ತಮ್ಮ ತಂಡಕ್ಕೆ ಹೇಳಿರುವುದಾಗಿ ಮೋದಿ ಹೇಳಿದರು.
ವಿಶ್ವ ಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿಯಂತಹ ಅನೇಕ ಹಣಕಾಸು ಸಂಸ್ಥೆಗಳು ಭಾರತದ ಆರ್ಥಿಕತೆ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿವೆ. ನಮ್ಮ ಸಂಪೂರ್ಣ ಸಾಮರ್ಥ್ಯವನ್ನು ತೋರಿಸಲು ಮತ್ತು ಸಾಧಿಸುವುದಕ್ಕೆ ಇರುವ ಅಡೆತಡೆಗಳನ್ನು ತೊಡೆದು ಹಾಕುವಲ್ಲಿ ನಾವು ಗಮನ ಹರಿಸುತ್ತಿದ್ದೇವೆ ಎಂದರು.

ಭಾರತಕ್ಕೆ ಪದೇ ಪದೇ ಭೇಟಿ ನೀಡುವವರು ಇಲ್ಲಿನ ಬದಲಾವಣೆಯನ್ನು ಗಮನಿಸಬಹುದು. ನಿರ್ದೇಶನ ಮತ್ತು ತೀವ್ರತೆ ಎರಡರಲ್ಲೂ ಬದಲಾವಣೆಯಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರದ ಗಾತ್ರವನ್ನು ಕಡಿಮೆ ಮಾಡಿ ಆಡಳಿತವನ್ನು ಹೆಚ್ಚಿಸಲು ತಮ್ಮ ಸರ್ಕಾರ ಗಮನ ಹರಿಸಿತ್ತು ಎಂದರು.

ಸರಕು ಮತ್ತು ಸೇವಾ ತೆರಿಗೆ ಜಾರಿ, ತೆರಿಗೆ ವಿಧಾನ ಸರಳಗೊಳಿಸಿದ್ದು ವಹಿವಾಟುಗಳ ವೆಚ್ಚವನ್ನು ಕಡಿಮೆ ಮಾಡಿ ಪ್ರಕ್ರಿಯೆಗಳನ್ನು ಹೆಚ್ಚು ದಕ್ಷವನ್ನಾಗಿಸಿವೆ. ಉದ್ಯಮ, ವಹಿವಾಟುಗಳ ವಿಧಾನ ಸರಳವಾಗಿದೆ ಎಂದು ಸಮರ್ಥಿಸಿಕೊಂಡರು.
2003ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿಯವರೇ ವೈಬ್ರೆಂಟ್ ಗುಜರಾತ್ ಆರಂಭಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT