ಅಣ್ಣಾ ಹಜಾರೆ 
ದೇಶ

ಲೋಕಾಪಾಲ ನೇಮಕಕ್ಕೆ ಆಗ್ರಹಿಸಿ ಜ.30 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

ಕೇಂದ್ರದಲ್ಲಿ ಲೋಕಾಪಾಲ ನೇಮಕಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಜನವರಿ 30 ರಿಂದ ಮಹಾರಾಷ್ಟ್ರದ ರಾಲೆಗಣ್ ಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಮುಂಬೈ:  ಕೇಂದ್ರದಲ್ಲಿ ಲೋಕಾಪಾಲ ನೇಮಕಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ  ಕಾರ್ಯಕರ್ತ ಅಣ್ಣಾ ಹಜಾರೆ  ಜನವರಿ 30 ರಿಂದ ಮಹಾರಾಷ್ಟ್ರದ ರಾಲೆಗಣ್ ಸಿದ್ಧಿಯಲ್ಲಿ  ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಲೋಕಾಯುಕ್ತ  ಮತ್ತು ಲೋಕಾಯುಕ್ತ ಕಾಯ್ದೆ 2013 ಪ್ರಕಾರ ಭ್ರಷ್ಟಾಚಾರ ನಿಗ್ರಹ  ಒಂಬುಡ್ಸ್ ಮನ್ ಮತ್ತು ಲೋಕಾಪಾಲ ನೇಮಕಕ್ಕೆ   ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ.  ದೇಶವನ್ನು ಸರ್ವಾಧಿಕಾರತ್ವ ಆಡಳಿತಕ್ಕೆ  ಒಳಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗುಡುಗಿದ್ದಾರೆ.

2013ರಲ್ಲಿ ಲೋಕಾಯುಕ್ತ ಮತ್ತು ಲೋಕಾಪಾಲ್  ಕಾಯ್ದೆ ಮಾಡಲಾಗಿತ್ತು. ಆ ಬಳಿಕ 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂತು. ಅವರು ಐದು ವರ್ಷಗಳಲ್ಲಿ ಏನನ್ನೂ ಮಾಡಿಲ್ಲ,  ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ 32 ಪತ್ರಗಳನ್ನು ಬರೆದಿದ್ದೆ. ಆದರೆ,  ಪ್ರಧಾನಿ ಲೋಕ್ ಪಾಲ್ ಕುರಿತಾಗಿನ ಯಾವುದೇ ಆಶ್ವಾಸನೆಗಳನ್ನು ಈಡೇರಿಸಲಿಲ್ಲ ಎಂದು ಹಜಾರೆ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಲೋಕಪಾಲ ನೇಮಕ ಕುರಿತಾಗಿ ಸಮಿತಿ ಸಭೆ ಜನವರಿ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿದೆ. ಸಮಿತಿಯಲ್ಲಿ  ಲೋಕಸಭಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೂ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT